ಪಂಜಾಬ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಭದ್ರತೆ ವಿಚಾರದಲ್ಲಿ ಅತಿದೊಡ್ಡ ಲೋಪವಾಗಿದೆ. ಈ ಕುರಿತಂತೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀ ಕೋರ್ಟ್ ಸಮ್ಮತಿ ಸೂಚಿಸಿ, ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.
ಲಾಯರ್ಸ್ ವಾಯ್ಸ್ ಸಲ್ಲಿಸಿದ ಅರ್ಜಿ ವಿಚಾರಣೆ ಪಂಜಾಬ್ನಲ್ಲಿ ನಡೆದ ಭದ್ರತಾ ಲೋಪದ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿಗಳ ಭದ್ರತೆಯ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಯಾವುದೇ ರೀತಿಯ ಲೋಪವಾಗದಂತೆ ಕ್ರಮಕೈಗೊಳ್ಳಲು ಕೋರಿ ಸುಪ್ರೀ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಹಿರಿಯ ವಕೀಲ ಮಣಿಂದರ್ ಸಿಂಗ್ ಪಂಜಾಬ್ನ ಫಿರೋಜ್ಪುರದಲ್ಲಿ ಬುಧವಾರ ಪ್ರಧಾನಿಗಳು ಭದ್ರತೆ ವಿಚಾರದಲ್ಲಿ ಅತಿದೊಡ್ಡ ಲೋಪವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ವಕೀಲರ ಅರ್ಜಿಯನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ. ಅಲ್ಲದೇ ನಾಳೆಯ ವಿಚಾರಣೆ ಸಂದರ್ಭದಲ್ಲಿ ಮೊದಲು ಈ ಪ್ರಕರಣವನ್ನೇ ಕೈಗೆತ್ತಿಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ