ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ಮೈಸೂರು ಮತ್ತು ಬೆಂಗಳೂರು ನಡುವಿನ ದಶಪಥ ಹೆದ್ದಾರಿ ಮಾರ್ಗದಲ್ಲಿ ಸಂಚಾರ ಬದಲಾವಣೆ ಆಗಲಿದೆ.
ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ವಾಹನಗಳು ಬಿಡದಿ- ಹಾರೋಹಳ್ಳಿ- ಕನಕಪುರ-ಮಳವಳ್ಳಿ ಮಾರ್ಗವಾಗಿ ಮೈಸೂರು ಪ್ರಯಾಣ ಮಾಡಬಹುದು. ಮೈಸೂರಿನಿಂದ ಬರುವ ವಾಹನಗಳು ಮದ್ದೂರು- ಕುಣಿಗಲ್-ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಬಹುದು.
ಮಾರ್ಗ ಬದಲಾವಣೆ ಮಾಡಿ ರಾಮನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಏಪ್ರಿಲ್ 30ರ ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಎಕ್ಸ್ಪ್ರೆಸ್ ಹೈವೆ ಬಂದ್ ಆಗಲಿದೆ.
ಏ.30 ರಂದು ಚನ್ನಪಟ್ಟಣಕ್ಕೆ ಮೋದಿ ಭೇಟಿ ನೀಡಿದರೆ, ಮೇ 4 ರಂದು ಕನಕಪುರಕ್ಕೆ ಅಮಿತ್ ಷಾ ಭೇಟಿ ಕೊಡಲಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ರಾಮನಗರದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದರು.
ಏಪ್ರಿಲ್ 30 ಭಾನುವಾರ ಆಗಿದ್ದು, ಅಂದು ವಾಹನ ದಟ್ಟಣೆ ಹೆಚ್ಚಳವಾಗಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.
- ಬಸ್ -ಟಿಪ್ಪರ್ ನಡುವೆ ಓವರ್ ಟೇಕ್ : ಮಹಿಳೆ ಸಾವು
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
More Stories
ಬಸ್ -ಟಿಪ್ಪರ್ ನಡುವೆ ಓವರ್ ಟೇಕ್ : ಮಹಿಳೆ ಸಾವು
ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
“ನಮ್ಮನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ” – ಪ್ರಮೋದಾ ದೇವಿ ಒಡೆಯರ್