Karnataka

ಇಂದು , ನಾಳೆ ಮೈಸೂರಿಗೆ ಪ್ರಧಾನಿ : ಕಾರ್ಯಕ್ರಮದ ವಿವರ

ಪ್ರಾಜೆಕ್ಟ್​ ಟೈಗರ್​​ಗೆ 50 ವರ್ಷ ತುಂಬಿದ ಸಂಭ್ರಮದಲ್ಲಿ ಇಂದು ಸಂಜೆ ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ.

ಮೈಸೂರಿನ ಱಡಿಷನ್ ಬ್ಲೂ ಹೋಟೆಲ್‌ನಲ್ಲಿ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ.

ನಾಳೆ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್​​​ಗೆ ಬಂದಿಳಿಯಲಿರುವ ಪ್ರಧಾನಿ ಮೋದಿ ಕಾರಿನಲ್ಲಿ ಬಂಡಿಪುರ ಕ್ಯಾಂಪಸ್​​ಗೆ ತೆರಳಲಿದ್ದಾರೆ. ಬಳಿಕ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

ನರೇಂದ್ರ ಮೋದಿ ಈವರೆಗೆ 7 ಬಾರಿ‌ ಮೈಸೂರಿಗೆ ಆಗಮಿಸಿದ್ದಾರೆ. ಅದರಲ್ಲಿ 4 ಬಾರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದರು. ಪ್ರಧಾನಿ ಆದ ನಂತರ ಮೋದಿ 4ನೇ ಬಾರಿಗೆ ಮೈಸೂರಿಗೆ ಬರುತ್ತಿದ್ದಾರೆ. ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಪ್ರಧಾನಿ ಕಾರ್ಯಕ್ರಮದ ವಿವರ :

  • ಇಂದು ಸಂಜೆ 7:30ಕ್ಕೆ ದೆಹಲಿಯಿಂದ ಮೈಸೂರಿಗೆ ಆಗಮನ
  • ಮೈಸೂರಿನ ಱಡಿಷನ್ ಬ್ಲೂ ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ
  • ನಾಳೆ ಬೆಳಗ್ಗೆ 6: 30 ಬಂಡೀಪುರಕ್ಕೆ ಹೆಲಿಕಾಪ್ಟರ್​​ನಲ್ಲಿ ಪ್ರಯಾಣ
  • ಬೆಳಗ್ಗೆ 7ಕ್ಕೆ ಬಂಡೀಪುರಕ್ಕೆ ಆಗಮಿಸಿ ಅಭಯಾರಣ್ಯದಲ್ಲಿ ಸಫಾರಿ
  • ಬೆಳಗ್ಗೆ 9:30ಕ್ಕೆ ತಮಿಳುನಾಡಿನ ನೀಲಗಿರೀಸ್‌ಗೆ ಮೋದಿ ಪ್ರಯಾಣ
  • ಬೆಳಗ್ಗೆ 11ಕ್ಕೆ ಮೈಸೂರಿನ ಓವಲ್ ಮೈದಾನಕ್ಕೆ ಮೋದಿ ಆಗಮನ
  • ಕೆಎಸ್ಒಯುನ ಘಟಿಕೋತ್ಸವ ಭವನದಲ್ಲಿ ನಡೆಯುವ ಸಂಭ್ರಮ
  • ಅರಣ್ಯಾಧಿಕಾರಿಗಳು, ವಿದೇಶಿ ಅತಿಥಿಗಳ ಜೊತೆ ಪ್ರಧಾನಿ ಚರ್ಚೆ
  • ಮಧ್ಯಾಹ್ನ 12:30ಕ್ಕೆ ಮಂಡಕಳ್ಳಿ ನಿಲ್ದಾಣದಿಂದ ದೆಹಲಿಗೆ ಪ್ರಯಾಣ

ಇದನ್ನು ಓದಿ –ಪಕ್ಷೇತರ ಸ್ಪರ್ಧೆಗೆ ಒತ್ತಾಯ: ಕಡೂರಿನಲ್ಲಿ ಏ 9 ರಂದು ದತ್ತ ಅಭಿಮಾನಿಗಳ ಸಭೆ

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024