Trending

ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ- ಯುವಕರಿಗೆ ಪ್ರಧಾನಿ ಕರೆ

ದೇಶದ ಭವಿಷ್ಯ ಯುವಕರ ಮೇಲೆ ನಿಂತಿದೆ. ಇಂದು ಯುವಕರಿಗೆ ಬಹಳ ವಿಶೇಷ ದಿನ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ. ಎಂದು ಯುವಕರಿಗೆ ಪ್ರಧಾನಿ ಮೋದಿ ಕರೆ ನೀಡಿದರು

ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಗುರುವಾರ ನಡೆದ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಿದ ನರೇಂದ್ರ ಮೋದಿಯವರು, ಕನ್ನಡ ನಾಡು, ನುಡಿ, ಜನ, ಸಂಸ್ಕೃತಿಯನ್ನು ನೆನೆದರು.

ಇಂದು ಸ್ವಾಮಿ ವಿವೇಕಾನಂದರ ಹುಟ್ಟಿದ ದಿನ. ಸ್ವಾಮಿ ವಿವೇಕಾನಂದರ ಪ್ರೇರಣೆಯಿಂದಲೇ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮದು ಶೇ.40ಕ್ಕೂ ಹೆಚ್ಚು ಯುವಕರು ಇರೋ ದೇಶ ಎಂದರು. ಫೆ.17 ರಂದು ರಾಜ್ಯ ಬಜೆಟ್ : ಜನಪ್ರಿಯ ಯೋಜನೆಗಳ ಘೋಷಣೆ ನಿರೀಕ್ಷೆ

ಸ್ವಾಮಿ ವಿವೇಕಾನಂದರಿಗೆ ಕರ್ನಾಟಕದೊಂದಿಗೆ ಒಳ್ಳೆಯ ಸಂಬಂಧ ಇತ್ತು. ಬೆಂಗಳೂರಿಗೆ ಹೋದಾಗ ವಿವೇಕಾನಂದರ ಯಾತ್ರೆ ಹುಬ್ಬಳ್ಳಿಗೂ ಬಂದಿತ್ತು. ವಿವೇಕಾನಂದರ ಚಿಕಾಗೋ ಯಾತ್ರೆ ಸ್ಮರಣೀಯ. ಇಡೀ ದೇಶ ಈ ಸಂದರ್ಭದಲ್ಲಿ ಹೊಸ ಸಂಕಲ್ಪದೊಂದಿಗೆ ಮುಂದೆ ಸಾಗಬೇಕಿದೆ. ವಿವೇಕಾನಂದರು ಹೇಳಿದ ಹಾಗೇ ಯುವಕರಿಂದಲೇ ದೇಶ ಎಂದು ಕರೆ ನೀಡಿದ್ರು.

ಯುವರು ಕರ್ತವ್ಯ ಅರಿತು, ದೇಶವನ್ನು ಮುನ್ನಡೆಸಬೇಕು. ಇದಕ್ಕೆ ಸ್ವಾಮಿ ವಿವೇಕಾನಂದರೇ ಪ್ರೇರಣೆ ಆಗಿರಬೇಕು. ಇತ್ತೀಚೆಗೆ ಕರ್ನಾಟಕ ಕಂಡ ಸಿದ್ದೇಶ್ವರ ಸ್ವಾಮಿಗಳು ನಿಧನರಾಗಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದು ಸ್ಮರಿಸಿದರು.

ಸಿದ್ದಾರೂಢ ಮಠ ಸೇರಿದಂತೆ ಮೂರು ಸಾವಿರ ಮಠಗಳಿಗೆ ನನ್ನ ನಮಸ್ಕಾರ. ಹುಬ್ಬಳ್ಳಿ ರಾಣಿ ಚೆನ್ನಮ್ಮನ ನಾಡು, ರಾಯಣ್ಣನ ಬೀಡು. ಕರ್ನಾಟಕ ಸಂಸ್ಕೃತಿ ಮತ್ತು ಜ್ಞಾನಕ್ಕೆ ಹೆಸರುವಾಸಿ ಆಗಿದೆ. ಇಲ್ಲಿಂದ ದೇಶಕ್ಕೆ ಸಾಕಷ್ಟು ಸಂಗೀತ ಮಹನೀಯರು ಸಿಕ್ಕಿದ್ದಾರೆ. ಮಲ್ಲಿಕಾರ್ಜುನ ಮಾನ್ಸೂರ್, ಭೀಮಸೇನ್ ಜೋಶಿ, ಗಂಗೂಬಾಯಿ ಹಾನಗಲ್ ಸೇರಿದಂತೆ ಅನೇಕ ಸಂಗೀತ ಮಹನೀಯರು ಬಂದ ನಾಡು ಇದು ಎಂದು ಕೊಂಡಾಡಿದರು.

Team Newsnap
Leave a Comment
Share
Published by
Team Newsnap

Recent Posts

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024