Categories: Main News

ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆ ಮೀಸಲು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (PHANA) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ. ಒಂದು ವಾರದೊಳಗೆ 50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ. ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

ರೆಮಿಡಿಸಿವಿರ್ ಔಷಧಿ ತಯಾರಿಕೆ, ಪೂರೈಕೆಯನ್ನು ಕಂಪನಿಗಳು ಸ್ಥಗಿತಗೊಳಿಸಿವೆ. ರಾಜ್ಯಕ್ಕೆ ಇದರ ಅಗತ್ಯ ಇದೆ. ಕೆಲ ಖಾಸಗಿ ಆಸ್ಪತ್ರೆಗಳು ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಡ್ರಗ್ ಕಂಟ್ರೋಲರ್ ಜೊತೆ ಚರ್ಚಿಸಿ, ಅಗತ್ಯವಿರುವ ಔಷಧ ಪ್ರಮಾಣ ಗುರುತು ಮಾಡಿ, ಸರ್ಕಾರದಿಂದಲೇ ನಿರ್ದಿಷ್ಟ ದರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕ್ರಮ ವಹಿಸಲಾಗುವುದು. ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಕೊರತೆಯ ಸಂಭವ ಬಂದರೆ ಕೈಗಾರಿಕಾ ಆಕ್ಸಿಜನ್ ಬಳಸಲು ಕ್ರಮ ವಹಿಸಲಾಗುವುದು ಎಂದರು.

ತಾಂತ್ರಿಕ ಸಲಹಾ ಸಮಿತಿಯು ಮುಂದಿನ ಎರಡು ತಿಂಗಳ ಕೊರೊನಾ ಸ್ಥಿತಿಗತಿಯನ್ನು ಅಂದಾಜಿಸಿದ್ದು, ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದೆ. ಈ ಒಂದು ವರ್ಷದ ಅನುಭವದಲ್ಲಿ ಕೊರೊನಾ ಬಗ್ಗೆ ಗೊತ್ತಾಗಿದೆ. ಕೋವಿಡ್ ನಿಂದಾಗಿ ಆರ್ಥಿಕ ನಷ್ಟ ಉಂಟಾಗಿದ್ದು, ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮಕ್ಕೆ ಮುಂದಾಗುವುದು ಕಷ್ಟ ಎಂದರು.

ಕೋವಿಡ್ ಪರೀಕ್ಷೆಯಲ್ಲಿ ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ. ಇದೊಂದು ತಪ್ಪಿಗಾಗಿ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಮರೆಮಾಚುವುದು ಬೇಡ. ಈವರೆಗೆ 2.2 ಕೋಟಿಗೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85% ನಷ್ಟು ಆರ್ ಟಿಪಿಸಿಆರ್ ಪರೀಕ್ಷೆಯಾಗಿದೆ ಎಂದರು.

ಕೊರೊನಾ ತಡೆಗೆ ಜನರ ಸಹಕಾರ ಅಗತ್ಯ. ಲಾಕ್ ಡೌನ್ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅಂತಹ ಅನಿವಾರ್ಯ ತರಬೇಡಿ ಎಂದು ಮನವಿ ಮಾಡುತ್ತಿದ್ದೇವೆ. ಲಾಕ್ ಡೌನ್ ನಿಂದ ಎಷ್ಟು ನಷ್ಟವಾಗುತ್ತದೆ ಎಂಬ ಅರಿವಿದೆ ಎಂದರು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024