ಕೊರೊನಾ ಸೋಂಕು ಇಳಿಮುಖ ವಾಗುತ್ತಿದ್ದಂತೆ ಸರ್ಕಾರ ಜನವರಿ 1 ರಿಂದ ಶಾಲೆ ಆರಂಭ ಮಾಡಲು ತೀರ್ಮಾನ ಮಾಡಿದರೆ, ಇತ್ತ ಅನುದಾನ ರಹಿತ ಖಾಸಗಿ ಶಾಲೆಗಳ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಾಳೆಯಿಂದಲೇ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
ಇದರಿಂದ ರಾಜ್ಯಸರ್ಕಾರಕ್ಕೆ ಮತ್ತೊಂದು ದೊಡ್ಡ ವಿಘ್ನ ಎದುರಾದಂತಾಗಿದೆ.
ತಮ್ಮ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ತೀವ್ರ ರೀತಿಯ ಹೋರಾಟಕ್ಕೆ ಮತ್ತೆ ಸಜ್ಜಾಗಿ ನಿಂತಿದೆ.
ನಾಳೆಯಿಂದ ಆನ್ ಲೈನ್ ಮತ್ತು ಆಫ್ ಲೈನ್ ಕ್ಲಾಸ್ ಬಂದ್ ಮಾಡಲಾಗು ವುದು. ಜೊತೆಗೆ ನಮ್ಮ ಬೇಡಿಕೆ ಈಡೇರುವ ತನಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ಸಂಘ ಸ್ಪಷ್ಟವಾಗಿ ಹೇಳಿದೆ.
ರಾಜ್ಯದಲ್ಲಿ 12,800 ಶಾಲೆಗಳು ಬಂದ್ ಆಗಲಿವೆ. ನಾಳೆಯಿಂದ ಆನ್ ಲೈನ್ ಮತ್ತು ಆಫ್ ಲೈನ್ ಕ್ಲಾಸ್ ಸ್ಥಗಿತ ಮಾಡಿ, ಈ ಹೋರಾಟಕ್ಕೂ ಸರ್ಕಾರ ಒಪ್ಪದೇ ಹೋದರೆ ಜ. 6 ರಿಂದ ರಾಜ್ಯಾದ್ಯಾಂತ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು