ನನಗೆ ಒಂದು ಕಡೆ ಜೆಡಿಎಸ್ ಹೊಡೆತ ಇನ್ನೊಂದೆಡೆ ಬಿಜೆಪಿ ಮತ್ತು ಆರ್ಎಸ್ಎಸ್ ಹೊಡೆತ ನೀಡಿದೆ. ಈಗ ನನ್ನ ರಕ್ಷಣೆಗೆ ಮತದಾರರೇ ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಮನವಿ ಮಾಡಿದರು
ಬದಾಮಿಯಲ್ಲಿ ಕೈ ಆಭ್ಯರ್ಥಿ ಸುನೀಲಗೌಡ ಪಾಟೀಲ ಪರ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ
ಭಾಷಣ ಮಾಡಿ, ನಾನು 12 ವರ್ಷ ಹಣಕಾಸು ಮಂತ್ರಿಯಾಗಿ 13 ಬಜೆಟ್ ಮಂಡಿಸಿದ್ದೇನೆ . ಯಾವನಾದ್ರೂ ಒಬ್ಬ ಕಂಟ್ರಾಕ್ಟರ್ ಎಲ್ ಓಸಿ ತೆಗೆದುಕೊಳ್ಳಲು ಸಿದ್ದರಾಮಯ್ಯ ಐದು ಪೈಸೆ ತೆಗೆದುಕೊಂಡಿದ್ದಾನೆ ಅಂದ್ರೆ ಆವತ್ತೆ ರಾಜಕೀಯದಿಂದ ನಿವೃತ್ತಿ ಆಗುವುದಾಗಿ ಸವಾಲು ಹಾಕಿದರು
ಒಂದು ಕಡೆ ಜೆಡಿಎಸ್, ಬಿಜೆಪಿ, ಇನ್ನೊಂದಡೆ ಆರ್ಎಸ್ಎಸ್ ಹೊಡೆತ ನೋಡಿ, ಸದ್ಯ ನೀವೆ ನನ್ನ ರಕ್ಷಣೆಗೆ ಬರಬೇಕು. ಬರ್ತಿರಿ ಅಲ್ವಾ ಬಿಜೆಪಿಯವರು ನಾಚಿಗೆ ಇಲ್ಲದವರು ಅವರಿಗೆ ಅಪ್ಪಿ ತಪ್ಪಿಯೂ ಓಟು ಹಾಕಬಾರದು. ಈ ಜಿಗಜಿಣಗಿ, ಕಾರಜೋಳ, ನಾರಾಯಣಸ್ವಾಮಿ ಇವರೆಲ್ಲ ಸ್ವಾರ್ಥಕ್ಕಾಗಿ ಬಿಜೆಪಿಗೆ ಹೋಗಿದ್ದಾರೆ ಎಂದರು
ಅವರು ಸಂವಿಧಾನ ಬದಲಾಯಿಸುತ್ತೇವೆ ಅನ್ನುವ ಪಕ್ಷಕ್ಕೆ ಹೋಗಿದ್ದಾರೆ. ನಾನು ದಲಿತರನ್ನು ದಾರಿ ತಪ್ಪಿಸ್ತಿದ್ದಾರೆ ಅಂತ ಭಾಷಣ ಮಾಡಿದ್ದೆ. ಆದರೆ, ಸಿದ್ದರಾಮಯ್ಯ ದಲಿತರು ಹೊಟ್ಟೆಪಾಡಿಗೆ ಹೋಗಿದ್ದಾರೆ ಎಂದಿದ್ದಾರೆ ಎಂದು ಹುಟ್ಟು ಹಾಕಿಬಿಟ್ಟರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More
ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More
ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.… Read More
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.… Read More
ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318… Read More
This website uses cookies.
Leave a Comment