Karnataka

ಭೂಗ್ರಹದ ರಕ್ಷಣೆ ಎಲ್ಲರ ಜವಾಬ್ದಾರಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು:

ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುತ್ತಲೇ ಅಭಿವೃದ್ಧಿ ಸಾಧಿಸುವುದೇ ಸುಸ್ಥಿರ ಅಭಿವೃದ್ಧಿ. ಎಲ್ಲಾ ಜೀವರಾಶಿಗಳು ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶನಿವಾರ ನಡೆದ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಬೆಂಗಳೂರು ಘೋಷಣೆ ಬಿಡುಗಡೆ ಮಾಡಿ ಸಚಿವ ಖಂಡ್ರೆ ಮಾತನಾಡಿದರು.

ಪ್ರಕೃತಿ ಮತ್ತು ಪರಿಸರ, ಅರಣ್ಯ ಉಳಿದಾಗ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಹೀಗಾಗಿ ನಾವು ನೀವೆಲ್ಲರೂ ಭೂಗ್ರಹದ ರಕ್ಷಕರಾಗಬೇಕು ಎಂದು ಕರೆ ನೀಡಿದರು.

ಭಾರತದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾದ ಬೆಂಗಳೂರು, ತಾಂತ್ರಿಕ ನಾವೀನ್ಯತೆಯ ಕೇಂದ್ರ ಮಾತ್ರವಲ್ಲ, ಸುಸ್ಥಿರ ಅಭಿವೃದ್ಧಿಯ ಅನ್ವೇಷಣೆಯಲ್ಲಿಯೂ ಮುಂಚೂಣಿಯಲ್ಲಿದೆ. ಜಗತ್ತು ಇಂದು ಎದುರಿಸುತ್ತಿರುವ ಸವಾಲುಗಳಿಗೆ ಕರ್ನಾಟಕ ಅದರಲ್ಲೂ ಬೆಂಗಳೂರಿನ ಉದ್ಯಮಿಗಳು ಪರಿಹಾರ ಸಂಶೋಧಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಈ ಶೃಂಗಸಭೆ ಸಕಲ ಜೀವರಾಶಿಗಳೂ ಬದುಕಲು ಇರುವ ಏಕೈಕ ಭೂಗ್ರಹ ಮತ್ತು ಅದರ ಎಲ್ಲಾ ನಿವಾಸಿಗಳಿಗೆ ಸುಸ್ಥಿರ ಭವಿಷ್ಯದ ಭರವಸೆಗಳನ್ನು ಖಾತ್ರಿಪಡಿಸಬೇಕು. ನಗರೀಕರಣ, ಸಂಚಾರ ದಟ್ಟಣೆ, ಮಾಲಿನ್ಯದಿಂದಾಗಿ ಇಂದು ಶುದ್ಧ ಗಾಳಿ, ಶುದ್ಧ ನೀರಿನ ಲಭ್ಯತೆಯ ಸಮಸ್ಯೆಗಳು ಎದುರಾಗಿವೆ. ಈ ಶೃಂಗಸಭೆಯ ವಸ್ತು ವಿಷಯ, ” ಸುಸ್ಥಿರ ಅಭಿವೃದ್ಧಿ ನಾಯಕತ್ವ,” ಎಂಬುದಾಗಿದ್ದು, ದೂರದೃಷ್ಟಿಯ ನಾಯಕತ್ವದ ಅಗತ್ಯವನ್ನು ಪ್ರತಿಪಾದಿಸಬೇಕು ಎಂದರು.

ಸುಸ್ಥಿರ ಅಭಿವೃದ್ಧಿ ಎಂಬುದು ಕೇವಲ ಒಂದು ಪರಿಕಲ್ಪನೆಯಲ್ಲ ಇದು ನೈತಿಕತೆಯಾಗಬೇಕು. ಬದ್ಧತೆಯಾಗಬೇಕು. ಇಂದು ನಾವು ಕೈಗೊಳ್ಳುವ ನಿರ್ಧಾರ, ಕ್ರಮಗಳಿಂದ ಭವಿಷ್ಯದ ಕ್ಷೇಮದೊಂದಿಗೆ ರಾಜೀ ಮಾಡಿಕೊಳ್ಳದಂತಿರಬೇಕು. ಭವಿಷ್ಯದ ಪೀಳಿಗೆಗೆ ಸಮೃದ್ಧ ಭೂಮಿಯನ್ನು ಸುಸ್ಥಿರ ಅಭಿವೃದ್ಧಿಯ ಪ್ರಯೋಜನಗಳು ಕಟ್ಟಕಡೆಯ ವ್ಯಕ್ತಿಗೂ ಲಭ್ಯವಾಗಬೇಕು, ನಾವು ಅಂತರ್ಗತ ಬೆಳವಣಿಗೆಗೆ ಆದ್ಯತೆ ನೀಡಬೇಕು, ಸಾಮಾಜಿಕ ನ್ಯಾಯ, ಅಸಮಾನತೆಯನ್ನು ನಿವಾರಣೆಗೆ ಒತ್ತು ನೀಡಬೇಕು .

ಇಂಗಾಲದ ಹೊರಸೂಸುವಿಕೆ ತಗ್ಗಿಸಲು ಶುದ್ಧ ಇಂಧನಕ್ಕೆ ಹೆಚ್ಚು ಒತ್ತು ನೀಡಬೇಕು. ಸುಸ್ಥಿರ ಅಭಿವೃದ್ಧಿಗೆ ನಾವೀನ್ಯಪೂರ್ಣ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು. ಕೃಷಿ, ಇಂಧನ ಮತ್ತು ಆರೋಗ್ಯ ಆರೈಕೆ ಕ್ಷೇತ್ರದಲ್ಲೂ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣದ ಹಂತದಲ್ಲೇ ಸುಸ್ಥಿರ ಅಭಿವೃದ್ಧಿಯ ಪರಿಕಲ್ಪನೆಯನ್ನು ಮೂಡಿಸಬೇಕು ಎಂದು ಹೇಳಿದರು.

ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನದ ಪರಿಣಾಮವನ್ನು ತಗ್ಗಿಸುವ ಮತ್ತು ನಮ್ಮ ಪರಿಸರವನ್ನು ರಕ್ಷಿಸುವ ಕಾರ್ಯತಂತ್ರಗಳು ಈ ಶೃಂಗಸಭೆಯಲ್ಲಿ ಹೊರಹೊಮ್ಮಲಿ ಎಂದು ಆಶಿಸಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಹೇಳಿದ ಅವರು,
ಜೀವವೈವಿಧ್ಯತೆಯನ್ನು ರಕ್ಷಿಸುವ ಮತ್ತು ಪುನಃಸ್ಥಾಪಿಸುವ ತಕ್ಷಣದ ಅಗತ್ಯವನ್ನು ಚರ್ಚಿಸುವತ್ತ ಈ ಶೃಂಗಸಭೆ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.

ಶೃಂಗದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಿವೃತ್ತ ಮುಖ್ಯಕಾರ್ಯದರ್ಶಿ ಎ. ರವೀಂದ್ರ ಮತ್ತಿತರರು ಪಾಲ್ಗೊಂಡಿದ್ದರು.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024