ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮರು ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಂದಿನ ವಿಚಾರಣೆಯ ತನಕ ಮರುಪರೀಕ್ಷೆ ದಿನಾಂಕ ಪ್ರಕಟಿಸದೆ ಸೂಚನೆ ನೀಡಿದೆ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪಿಎಸ್ಐ ಕೇಸ್ನಲ್ಲಿ ಆರೋಪಿತ ಎಡಿಜಿಪಿ ಅಮೃತ್ ಪೌಲ್ ವಿರುದ್ಧ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. 1,406 ಪುಟಗಳ ಹೆಚ್ಚುವರಿ ಚಾರ್ಟ್ಶೀಟ್ ಅನ್ನು ಸಿಐಡಿ ಸಲ್ಲಿಸಿದೆ.
545 ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ
ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್ ಪೌಲ್ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಮತ್ತೆ ವಿಚಾರಣೆಗೆ ಕರೆದಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್ ಪೌಲ್ ಅವರನ್ನು ಬಂಧಿಸಿದೆ.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ