ವಿಜ್ಞಾನ ವಿಭಾಗದ ಬಹುತೇಕ ಎಲ್ಲಾ ಜಿಲ್ಲೆಗಳ ಉತ್ತರಪತ್ರಿಕೆಗಳ ಮೌಲ್ಯಮಾಪನ ರಾಜಧಾನಿ ಬೆಂಗಳೂರಿನಲ್ಲಿ ಮಂದಗತಿಯಲ್ಲಿ ನಡೆದಿರುವ ಕಾರಣಕ್ಕಾಗಿ ದ್ವಿತೀಯ ಪಿಯು ಫಲಿತಾಂಶ ಜೂನ್ ಅಂತ್ಯಕ್ಕೆ ಪ್ರಕಟಿಸುವ ಸಾಧ್ಯತೆ ಇದೆ.
ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳ ಉತ್ತರಪತ್ರಿಕೆಗಳ ಮೌಲ್ಯಮಾಪನ ಉಡುಪಿ, ದಕ್ಷಿಣ ಕನ್ನಡ ಮೊದಲಾದ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಕಲಾ ವಿಭಾಗದ ಮೌಲ್ಯಮಾಪನ ಅಂತಿಮ ಹಂತದಲ್ಲಿದೆ ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದೆ. ವಾಣಿಜ್ಯ ವಿಭಾಗದ ಮೌಲ್ಯಮಾಪನವೂ ಈ ವಾರದೊಳಗೆ ಮುಗಿಯಲಿದೆ.
ಮೌಲ್ಯಮಾಪನ ಮುಗಿದ ಅನಂತರ ಫಲಿತಾಂಶ ಪ್ರಕಟಿಸಲು ಸಿದ್ಧತೆಗಾಗಿ ಕನಿಷ್ಠ 10 ದಿನಗಳು ಬೇಕು. ವಿಜ್ಞಾನ ವಿಭಾಗದಲ್ಲಿ ಉತ್ತರಪತ್ರಿಕೆಗಳ ಸಂಖ್ಯೆಯೂ ಹೆಚ್ಚಿದೆ ಮೌಲ್ಯಮಾಪಕರ ಕೊರತೆ ಇರುವುದರಿಂದ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ 15 ದಿನ ಬೇಕು. ಈ ಕಾರಣಕ್ಕಾಗಿ ಫಲಿತಾಂಶ ವಿಳಂಬವಾಗಬಹುದು ಎನ್ನಲಾಗುತ್ತಿದೆ.
ಇದನ್ನು ಓದಿ : UPSC ಸಿವಿಲ್ 2021 ಫೈನಲ್ ಫಲಿತಾಂಶ :ಟಾಪ್ ಮೂರು ಸ್ಥಾನ ಮಹಿಳೆಯರದ್ದೆ -ರಾಜ್ಯದ 24 ಮಂದಿ ಆಯ್ಕೆ : ಪಟ್ಟಿ ನೋಡಿ
ಕಲಾ ಮತ್ತು ವಾಣಿಜ್ಯ ವಿಭಾಗದ ಉತ್ತರ ಪತ್ರಿಕೆಯ ಮೌಲ್ಯಮಾಪನಕ್ಕೆ ಸರ್ಕಾರಿ ಮತ್ತು ಅನುದಾನಿತ ಪ.ಪೂ.ಕಾಲೇಜುಗಳಲ್ಲಿ ಉಪನ್ಯಾಸಕರು ಹೆಚ್ಚಿದ್ದಾರೆ. ಆದರೆ ವಿಜ್ಞಾನ ವಿಭಾಗಕ್ಕೆ ಖಾಸಗಿ ಪ.ಪೂ. ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಳ್ಳುವುದು ಅನಿವಾರ್ಯ. ಇವರಲ್ಲಿ ಬಹುತೇಕ ಮಂದಿ ಸಿಇಟಿ, ನೀಟ್ ಇತ್ಯಾದಿ ಕೋಚಿಂಗ್ನಲ್ಲಿ ತೊಡಗಿಕೊಂಡಿರುವುದರಿಂದ ಮೌಲ್ಯಮಾಪನಕ್ಕೆ ಸೂಕ್ತ ಸಮಯದಲ್ಲಿ ಹಾಜರಾಗುತ್ತಿಲ್ಲ. ಹೀಗಾಗಿ ವಿಳಂಬವಾಗುತ್ತಿದೆ.
ಮೌಲ್ಯಮಾಪನಕ್ಕೆ ಹಾಜರಾಗದ ಸರಕಾರಿ ಅಥವಾ ಅನುದಾನಿತ ಪಿಯು ಕಾಲೇಜುಗಳ ಉಪನ್ಯಾಸಕರು ಅಥವಾ ಕಾಲೇಜುಗಳ ಮೇಲೆ ಇಲಾಖೆ ನೇರ ಕ್ರಮ ಕೈಗೊಳ್ಳಲಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment