February 22, 2026

Newsnap Kannada

The World at your finger tips!

subudendra thirtha

ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ ಸುಭುದೇಂದ್ರತೀರ್ಥರ ಪ್ರಕಟ

Spread the love

ಶೀಘ್ರದಲ್ಲೇ ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದರು.

ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ 40 ನೇ ಪ್ರಾಂತ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಸ್ವಾಮೀಜಿ, ಮಂತ್ರಾಲಯ ಮಠ ವೈದಿಕ ಶಿಕ್ಷಣದ ಜೊತೆ ಹಲವು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಶೀಘ್ರದಲ್ಲೇ ವಿಶ್ವವಿದ್ಯಾಲಯವನ್ನೂ ಆರಂಭಿಸಲಾಗುತ್ತದೆ ಎಂದರು.

ಮಂತ್ರಾಲಯ ಮಠ ಮೊದಲಿನಿಂದಲೂ ಶಿಕ್ಷಣಕ್ಕೆ ಒತ್ತುಕೊಟ್ಟಿದೆ. ಈಗ ಒಂದು ಹೆಜ್ಜೆ ಮುಂದಕ್ಕೆ ಇಟ್ಟಿದೆ. ಹಣವನ್ನು ಗಳಿಸಬಹುದು ಆದರೆ ಖರ್ಚು ಮಾಡಿದಂತೆ ಅದು ಕಡಿಮೆಯಾಗುತ್ತದೆ. ವಿದ್ಯೆ ಯಾವ ದೇಶಕ್ಕೆ ಹೋದರು ಕಡಿಮೆಯಾಗುವುದಿಲ್ಲ ಹೆಚ್ಚಾಗುತ್ತದೆ ಎಂದರು.

error: Content is protected !!