ಸಾವಿನಲ್ಲೂ ಸಾರ್ಥಕತೆ ಮೆರದಿದ್ದ ಕನ್ನಡದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ ಕಣ್ಣುಗಳು ನಾಲ್ಕು ಅಂಧರ ಬಾಳಿಗೆ ಬೆಳಕನ್ನು ನೀಡಿವೆ.
ಪುನೀತ್ ನಿಧನದ ನಂತರ ದಾನ ಮಾಡಿದ್ದ ಕಣ್ಣುಗಳನ್ನುನಾಲ್ಕು ಜನರಿಗೆ ಜೋಡಿಸಲಾಗಿದೆ ಎಂದು ನಾರಾಯಣ ನೇತ್ರಾಲಯ ಮಾಹಿತಿ ನೀಡಿದೆ.
ಸುದ್ದಿಗಾರರ ಜೊತೆ ಮಾತನಾಡಿದ ನೇತ್ರಾಲಯದ ಮುಖ್ಯಸ್ಥ ಡಾ. ಭುಜಂಗ್ ಶೆಟ್ಟಿ ವೈದ್ಯಕೀಯ ಕ್ಷೇತ್ರದಲ್ಲಿನ ನವೀನ ಆವಿಷ್ಕಾರಗಳನ್ನು ಬಳಸಿಕೊಂಡು ಪುನೀತ್ ಅವರ ಕಣ್ಣುಗಳನ್ನು ನಾಲ್ವರಿಗೆ ಜೋಡಿಸಲಾಗಿದೆ ಎಂದು ತಿಳಿಸಿದರು.
ಸಹಜವಾಗಿ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸಬಹುದು ಆದರೆ ಪವರ್ಸ್ಟಾರ್ ಕಣ್ಣುಗಳನ್ನು ವಿಶೇಷ ಅಧುನಿಕ ತಂತ್ರಜ್ಞಾನದ ಸಹಕಾರದಿಂದ ಬೇರ್ಪಡಿಸಿ ಒಂದೊಂದು ಭಾಗವನ್ನು ಒಬ್ಬೊಬ್ಬರಿಗೆ ಜೋಡಿಸಲಾಗಿದೆ.
ರಾಜ್ಯದ ನೇತ್ರದಾನ ಇತಿಹಾಸದಲ್ಲಿ ಇದು ಮೊದಲ ಪ್ರಯತ್ನ ಎನ್ನಲಾಗಿದ್ದು, ನಾಲ್ವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಎಲ್ಲರೂ ಆರಾಮಾಗಿದ್ದಾರೆ. ಆ ಮೂಲಕ ಪುನೀತ್ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು