ಸಾವಿನಲ್ಲೂ ಸಾರ್ಥಕತೆ ಮೆರದಿದ್ದ ಕನ್ನಡದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ ಕಣ್ಣುಗಳು ನಾಲ್ಕು ಅಂಧರ ಬಾಳಿಗೆ ಬೆಳಕನ್ನು ನೀಡಿವೆ.
ಪುನೀತ್ ನಿಧನದ ನಂತರ ದಾನ ಮಾಡಿದ್ದ ಕಣ್ಣುಗಳನ್ನುನಾಲ್ಕು ಜನರಿಗೆ ಜೋಡಿಸಲಾಗಿದೆ ಎಂದು ನಾರಾಯಣ ನೇತ್ರಾಲಯ ಮಾಹಿತಿ ನೀಡಿದೆ.
ಸುದ್ದಿಗಾರರ ಜೊತೆ ಮಾತನಾಡಿದ ನೇತ್ರಾಲಯದ ಮುಖ್ಯಸ್ಥ ಡಾ. ಭುಜಂಗ್ ಶೆಟ್ಟಿ ವೈದ್ಯಕೀಯ ಕ್ಷೇತ್ರದಲ್ಲಿನ ನವೀನ ಆವಿಷ್ಕಾರಗಳನ್ನು ಬಳಸಿಕೊಂಡು ಪುನೀತ್ ಅವರ ಕಣ್ಣುಗಳನ್ನು ನಾಲ್ವರಿಗೆ ಜೋಡಿಸಲಾಗಿದೆ ಎಂದು ತಿಳಿಸಿದರು.
ಸಹಜವಾಗಿ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸಬಹುದು ಆದರೆ ಪವರ್ಸ್ಟಾರ್ ಕಣ್ಣುಗಳನ್ನು ವಿಶೇಷ ಅಧುನಿಕ ತಂತ್ರಜ್ಞಾನದ ಸಹಕಾರದಿಂದ ಬೇರ್ಪಡಿಸಿ ಒಂದೊಂದು ಭಾಗವನ್ನು ಒಬ್ಬೊಬ್ಬರಿಗೆ ಜೋಡಿಸಲಾಗಿದೆ.
ರಾಜ್ಯದ ನೇತ್ರದಾನ ಇತಿಹಾಸದಲ್ಲಿ ಇದು ಮೊದಲ ಪ್ರಯತ್ನ ಎನ್ನಲಾಗಿದ್ದು, ನಾಲ್ವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಎಲ್ಲರೂ ಆರಾಮಾಗಿದ್ದಾರೆ. ಆ ಮೂಲಕ ಪುನೀತ್ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment