ನಟ ಪುನೀತ್ ರಾಜ್ ಕುಮಾರ್ ಗೆ ಚಿತ್ರದುರ್ಗದ ಮುರುಘಾ ಮಠದ ಪ್ರತಿಷ್ಠಿತ ಬಸವ ಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದೆ.
ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪ ಸಭಾಂಗದಲ್ಲಿ ಬಸವ ಜಯಂತಿ ದಿನವಾದ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಶಸ್ತಿ ಜೊತೆಯಲ್ಲಿ ಐದು ಲಕ್ಷ ರು. ನಗದು ಹಾಗೂ ಫಲಕವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಧಾನ ಮಾಡಲಾಗುವುದು.
ಚಿತ್ರದುರ್ಗದ ಮುರುಘಾ ಶರಣರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ , ನಟ ಶಿವರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.