ಪವರ್ ಸ್ಟಾರ್ ಪುನೀತ್ ತೆಲುಗು ನಟ ಮೆಗಸ್ಟಾರ್ ಚಿರಂಜೀವಿ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಬೇಕಿತ್ತು ಎಂಬ ಸುದ್ದಿ ಹೊರಬಿದ್ದಿದೆ.
ಚಿರಂಜೀವಿ ಮುಂದಿನ ಭೋಲಾ ಶಂಕರ್ ಸಿನಿಮಾದಲ್ಲಿ ಪುನೀತ್ ಒಂದು ಹಾಡಿನಲ್ಲಿ ಕಾಣಿಸಿಕೊಳ್ಳಬೇಕಿತ್ತು.
ಭೋಲಾ ಶಂಕರ್ ಇದು ಅಜಿತ್ ಅಭಿನಯದ ತಮಿಳಿನ ವೇದಾಲಂ ಚಿತ್ರದ ರಿಮೇಕ್.
ಈ ಸಿನಿಮಾದಲ್ಲಿ ಚಿರಂಜೀವಿ ಎಂಟ್ರಿ ಸಾಂಗ್ನಲ್ಲಿ ಕುಣಿಯಬೇಕಿತ್ತು. ಆದರೀಗ, ಈ ಕನಸು ನನಸಾಗಿಯೇ ಉಳಿಯೋಯ್ತು ಎಂಬುದು ಚಿತ್ರತಂಡದ ಅಳಲು.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸತ್ಯವನ್ನು ಯಾರಿಂದಲೂ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅಪ್ಪು ಅಂತ್ಯಕ್ರಿಯೆ ಬಳಿಕವೂ ಹಲವು ಗಣ್ಯರು ಡಾ. ಶಿವರಾಜಕುಮಾರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.
ಈಗ ಮೆಗಸ್ಟಾರ್ ಚಿರಂಜೀವಿ ಮಗ ರಾಮಚರಣ್ ತೇಜ್ ಕೂಡ ಶಿವಣ್ಣ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ