March 9, 2026

Newsnap Kannada

The World at your finger tips!

hebburu

ಪುನೀತ್‌ ಅಂತಿಮ ದರ್ಶನ ಪಡೆದಿದ್ದ ಅಭಿಮಾನಿಗೆ ಹೃದಯಾಘಾತ; ಆಸ್ಪತ್ರೆಯಲ್ಲಿ ಸಾವು

Spread the love

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಶೋಕದಲ್ಲಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ತುಮಕೂರಿನ ಹಿರೇಹಳ್ಳಿಯ ಅಪ್ಪು ಶ್ರೀನಿವಾಸ್ (32) ಮೃತ ದುರ್ದೈವಿ.

ಶ್ರೀನಿವಾಸ್ ಸತತ ಎರಡು ದಿನ ಪುನೀತ್ ಅಂತಿಮ ದರ್ಶನ ಪಡೆದಿದ್ದರು. ಅಂತಿಮ ದರ್ಶನ ಪಡೆದು ಮನೆಗೆ ಮರಳಿದಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ನಿನ್ನೆ ಹೆಬ್ಬೂರಿನಲ್ಲಿ ಭರತ್ ಎಂಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆನ್ನಲ್ಲೇ ಇಂದು ಮತ್ತೋರ್ವ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಇಬ್ಬರು ಪುನೀತ್ ಅಭಿಮಾನಿಗಳ ಸಾವು ಸಂಭವಿಸಿದೆ.

error: Content is protected !!