ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ತನ್ನ ‘ಸೋದರ ಮಾವ’ ಪಂಜಾಬ್ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಪರ ನಾಳೆಯಿಂದ ಪ್ರಚಾರದ ಕಣಕ್ಕೆ ಧುಮುಕಲಿದ್ದಾರೆ.
ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಮತ್ತು ಪುತ್ರಿ ಹರ್ಷಿತಾ ಶುಕ್ರವಾರ ಪಂಜಾಬ್ಗೆ ಭೇಟಿ ನೀಡಲಿದ್ದಾರೆ.
ಮುಂದಿನ ವಾರ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಈ ಕುರಿತು ಸುನೀತಾ ಅವರೇ ಟ್ವಟ್ಟರ್ನಲ್ಲಿ, ನಾಳೆ ನನ್ನ ಸೋದರ ಮಾವ ಭಗವಂತ್ ಮಾನ್ ಅವರಿಗೆ ಮತ ಕೇಳಲು ನಾನು, ನನ್ನ ಮಗಳೊಂದಿಗೆ ಧುರಿಗೆ ಹೋಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಮಾನ್ 2022ರ ಪಂಜಾಬ್ ಚುನಾವಣೆಗೆ ಎಎಪಿ ಸಿಎಂ ಅಭ್ಯರ್ಥಿ. ಧುರಿಯಿಂದ ಸ್ಪರ್ಧಿಸಲಿದ್ದಾರೆ. ಇವರು ಸಂಗ್ರೂರ್ ನಿಂದ ಎರಡು ಬಾರಿ ಸಂಸದರಾಗಿದ್ದಾರೆ.
ಕಳೆದ ತಿಂಗಳು ಕೇಜ್ರಿವಾಲ್ ಅವರು, ನಿಮ್ಮ ಸಿಎಂ ಅಭ್ಯರ್ಥಿಯನ್ನು ನೀವೇ ಆಯ್ಕೆ ಮಾಡಿ ಎಂದು ಫೋನ್ ನಂಬರ್ ಬಿಡುಗಡೆ ಮಾಡಿದ್ದರು. ಫೋನ್ ಮಾಡಿದ ಜನರಲ್ಲಿ 93% ಜನರು ಮಾನ್ ಅವರ ಹೆಸರನ್ನು ಸೂಚಿಸಿದ್ದರು. ಪರಿಣಾಮ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಂದಿನ ಸಿಎಂ ಆಭ್ಯರ್ಥಿಯಾಗಿ ಮಾನ್ ಅವರನ್ನು ಘೋಷಿಸಿದರು. ಈ ವೇಳೆ ಕೇಜ್ರಿವಾನ್ ಅವರು, ಎಎಪಿ ಪಂಜಾಬ್ ಚುನಾವಣೆಯಲ್ಲಿ ಗೆಲ್ಲುವುದು ಸ್ಪಷ್ಟವಾಗಿದೆ ಎಂದಿದ್ದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ