ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ತನ್ನ ‘ಸೋದರ ಮಾವ’ ಪಂಜಾಬ್ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಪರ ನಾಳೆಯಿಂದ ಪ್ರಚಾರದ ಕಣಕ್ಕೆ ಧುಮುಕಲಿದ್ದಾರೆ.
ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಮತ್ತು ಪುತ್ರಿ ಹರ್ಷಿತಾ ಶುಕ್ರವಾರ ಪಂಜಾಬ್ಗೆ ಭೇಟಿ ನೀಡಲಿದ್ದಾರೆ.
ಮುಂದಿನ ವಾರ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಈ ಕುರಿತು ಸುನೀತಾ ಅವರೇ ಟ್ವಟ್ಟರ್ನಲ್ಲಿ, ನಾಳೆ ನನ್ನ ಸೋದರ ಮಾವ ಭಗವಂತ್ ಮಾನ್ ಅವರಿಗೆ ಮತ ಕೇಳಲು ನಾನು, ನನ್ನ ಮಗಳೊಂದಿಗೆ ಧುರಿಗೆ ಹೋಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಮಾನ್ 2022ರ ಪಂಜಾಬ್ ಚುನಾವಣೆಗೆ ಎಎಪಿ ಸಿಎಂ ಅಭ್ಯರ್ಥಿ. ಧುರಿಯಿಂದ ಸ್ಪರ್ಧಿಸಲಿದ್ದಾರೆ. ಇವರು ಸಂಗ್ರೂರ್ ನಿಂದ ಎರಡು ಬಾರಿ ಸಂಸದರಾಗಿದ್ದಾರೆ.
ಕಳೆದ ತಿಂಗಳು ಕೇಜ್ರಿವಾಲ್ ಅವರು, ನಿಮ್ಮ ಸಿಎಂ ಅಭ್ಯರ್ಥಿಯನ್ನು ನೀವೇ ಆಯ್ಕೆ ಮಾಡಿ ಎಂದು ಫೋನ್ ನಂಬರ್ ಬಿಡುಗಡೆ ಮಾಡಿದ್ದರು. ಫೋನ್ ಮಾಡಿದ ಜನರಲ್ಲಿ 93% ಜನರು ಮಾನ್ ಅವರ ಹೆಸರನ್ನು ಸೂಚಿಸಿದ್ದರು. ಪರಿಣಾಮ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಂದಿನ ಸಿಎಂ ಆಭ್ಯರ್ಥಿಯಾಗಿ ಮಾನ್ ಅವರನ್ನು ಘೋಷಿಸಿದರು. ಈ ವೇಳೆ ಕೇಜ್ರಿವಾನ್ ಅವರು, ಎಎಪಿ ಪಂಜಾಬ್ ಚುನಾವಣೆಯಲ್ಲಿ ಗೆಲ್ಲುವುದು ಸ್ಪಷ್ಟವಾಗಿದೆ ಎಂದಿದ್ದರು.
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
This website uses cookies.
Leave a Comment