ಕ್ರೀಡೆ

ಪಂಜಾಬ್ ಗೆ ಒಲಿದ ವಿಜಯ

ದುಬೈನ್ ಅಲ್ ಶೇಕ್ ಝಹೇಜ್ ಕ್ರೀಡಾoಗಣದಲ್ಲಿ ಇಂದು ನಡೆದ ಐಪಿಎಲ್ ನ 13ನೇ ಸರಣಿಯ 6ನೇ ದಿನದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಗೆಲುವಿನ ಗರಿಯನ್ನ ತನ್ನ ಮುಡಿಗೇರಿಸಿಕೊಂಡಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಸೋಲಿನ್ ರುಚಿಯನ್ನನುಭವಿಸಬೇಕಾಯ್ತು. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆರಂಭಿಕ ಆಟಗಾರರಾಗಿ ಮೈದಾನಕ್ಕಿಳಿದ ನಾಯಕ ಕೆ.ಎಲ್. ರಾಹುಲ್ ಅವರು, ಇಂದಿನ ಸ್ಕೋರ್ ಗಳ ಹೊಳೆಯನ್ನೇ ಹರಿಸಿದರು. 69 ಎಸೆತಗಳಲ್ಲಿ 132 ರನ್ ಗಳನ್ನು ಗಳಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿ ಕೊಟ್ಟರು. ಕೆ.ಎಲ್. ರಾಹುಲ್ ಅವರ ಸಹ ಆಟಗಾರ ಎಂ. ಅಗರ್ವಾಲ್ ಅವರು ಕೆ.ಎಲ್. ರಾಹುಲ್ ಅವರಿಗೆ ಒಳ್ಳೆಯ ಜೊತೆಯನ್ನು ನೀಡಿದರು. ತಂಡವು 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.

ಪಂಜಾಬ್ ತಂಡ ಕೊಟ್ಟ ಗುರಿಯನ್ನು ಬೆನ್ನತ್ತಿ ಹೊರಟ ಚಾಲೆಂಜರ್ಸ್ ಗೆ ನಿರಾಸೆ ಕಾದಿತ್ತು. ರಾಯಲ್ ಚಾಲೆಂಜರ್ಸ್ ತಂಡದ ಆರಂಭಿಕ ಆಟಗಾರರಾಗಿ ಡಿ. ಪಡಿಕ್ಕಲ್ ಅವರು ಫೀಲ್ಡಿಗಿಳಿದಾಗ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿತ್ತು. ಕಳೆದ ಮ್ಯಾಚ್ ನಲ್ಲಿ ಪಡಿಕ್ಕಲ್ ಅವರ ಕೊಡುಗೆಯನ್ನು ಯಾರೂ ಮರೆಯುವಂತಿರಲಿಲ್ಲ. ಆದರೆ ಅವರು ಕೇವಲ್ ಒಂದು ರನ್ ಗೆ ಔಟಾದಾಗ ಎಲ್ಲರ ನಿರೀಕ್ಷೆಯೂ ಸುಳ್ಳಾಯಿತು. ಎ.ಫಿಂಚ್ 20 (21), ಎಬಿ ಡೀ ವಿಲಿಯರ್ಸ್ 28 (18), ಡಬ್ಲ್ಯೂ. ಸುಂದರ್ 30 (27) ರನ್ ಗಳಿಸಿ ತಂಡವನ್ನು ನಿಗದಿತ ಗುರಿಯತ್ತ ಮುನ್ನಡೆಸುವಲ್ಲಿ ಪ್ರಯತ್ನ ಪಟ್ಟರು. ಆದರೆ ಮುರುಗನ್ ಅಶ್ವಿನ್, ರವಿ ಬಿಷ್ಣೋಯಿ ಅವರ ಬೌಲಿಂಗ್ ಎಲ್ಲ ಬ್ಯಾಟ್ಸ್ ಮನ್ ಗಳ ನೀರಿಳಿಸಿತು. 20 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ ಕೇವಲ 109 ರನ್ ಗಳನ್ನು ಮಾತ್ರ ಗಳಿಸಲು ತಂಡಕ್ಕೆ ಸಾಧ್ಯವಾಗಿದ್ದು.

ಇಡೀ ಪಂದ್ಯದಲ್ಲಿ ಘರ್ಜಿಸಿದ ರಾಹುಲ್ ಅವರಿಗೆ ಪಂದ್ಯದ ಶ್ರೇಷ್ಠ ಆಟಗಾರ ಬಿರುದು ಸಿಕ್ಕಿತು.

Team Newsnap
Leave a Comment
Share
Published by
Team Newsnap

Recent Posts

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024