ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರಿಯಾಯಿತಿ ದರದಲ್ಲಿ ಪುಣ್ಯ ಕ್ಷೇತ್ರಗಳ ಟೂರ್ ಪ್ಯಾಕೇಜ್ ಪರಿಚಯಗೊಳಿಸಿದೆ.
2022-23ನೇ ಸಾಲಿಗೆ ಜಾರಿ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್-ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯನ್ನು IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ ಎಂದಿದ್ದಾರೆ.
- ಯೋಜನೆಯಡಿ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ
- ತಲಾ ರೂ. 20,000/-ಗಳಂತೆ ಪ್ಯಾಕೇಜ್ ರೂಪಿಸಿದ್ದು, ಈ ಮೊತ್ತದಲ್ಲಿ ತಲಾ ರೂ. 5,000/-ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಿ ಉಳಿದ ಮೊತ್ತ ರೂ. 15,000/-ಗಳನ್ನು ಯಾತ್ರಾರ್ಥಿಗಳು ಪಾವತಿಸಬೇಕಾಗಿರುತ್ತದೆ.
- ಪ್ರವಾಸದಲ್ಲಿ ಏನು ಸೇರಿಸಲಾಗಿದೆ
- ರೈಲಿನಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಉಪಹಾರ, ಊಟ, ತಂಗುವಿಕೆ, ಸ್ಥಳೀಯ ಸಾರಿಗೆ ಮತ್ತು ಸ್ಥಳೀಯ ವೀಕ್ಷಣೆ ಒಳಗೊಂಡಿದೆ.
- ಎಷ್ಟು ದಿನಗಳ ಪ್ರವಾಸ
- 07 ದಿನಗಳ ಪ್ರವಾಸ
ಈ ಯೋಜನೆಯಡಿ 03 ಟ್ರಿಪ್ಗಳನ್ನು ಪೂರೈಸಿದ್ದು, ಸದರಿ ವಿಶೇಷ ರೈಲಿನಲ್ಲಿ ಒಟ್ಟು 1644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದು, ಸದರಿ ಯಾತ್ರಾರ್ಥಿಗಳಿಗೆ ಪ್ರಯಾಣದ ಒಟ್ಟು ಪ್ಯಾಕೇಜ್ದರ ರೂ. 20,000/-ಗಳ ಪೈಕಿ ಸರ್ಕಾರದಿಂದ ತಲಾ ರೂ. 5,000/-ಗಳಂತೆ 82.20 ಲಕ್ಷಗಳ ಸಹಾಯಧನವನ್ನು ವಿತರಿಸಲಾಗಿರುತ್ತದೆ ಎಂದಿದ್ದಾರೆ.
ಈಗ ನಾಲ್ಕನೇ ಟ್ರಿಪ್ಪಿನ ವಿಶೇಷ ರೈಲು ದಿನಾಂಕ: 29.07.2023ರಂದು ಬೆಂಗಳೂರಿನಿಂದ ಹೊರಡಲಿದ್ದು, ಸದರಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಅಥವಾ ಐ.ಆರ್.ಸಿ.ಟಿ.ಸಿ (IRCTC) ಪೋರ್ಟಲ್https://www.irctctourism.com ಮೂಲಕ ತಮ್ಮ ಟಿಕೇಟ್ ಅನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.ಅಧಿವೇಶನದಲ್ಲಿ ಹೈಡ್ರಾಮ: ಬಿಜೆಪಿಯ 10 ಶಾಸಕರು ಅಮಾನತು- ಎಳೆದು ತಂದ ಮಾರ್ಶಲ್ಗಳು – ಯತ್ನಾಳ್ ಅಸ್ವಸ್ಥ
ಈಗ ಹೊಸದಾಗಿ ಸುಸಜ್ಜಿತ LHB ಕೋಚ್ಗಳನ್ನು ಅಳವಡಿಸಲಾಗಿದ್ದು, ಇದು ಸುಸಜ್ಜಿತವಾದ ಸ್ಥಳದಲ್ಲಿಯೇ ಅಡುಗೆ ತಯಾರು ಮಾಡುವ ಅಡುಗೆ ಮನೆ (PANTRY CAR) ಒಳಗೊಂಡಿರುತ್ತದೆ ಹಾಗೂ ಯಾತ್ರಾರ್ಥಿಗಳ ಹಿತ ದೃಷ್ಟಿಯಿಂದ ಇಬ್ಬರು ವೈದ್ಯರು ಸಹ ಪ್ರಯಾಣಿಸುವರು ಎಂದು ಮಾಹಿತಿ ನೀಡಿದ್ದಾರೆ.
- 20 ಸಾವಿರ ಲಂಚ ಪಡೆಯುವಾಗ PDO ಅಧಿಕಾರಿ ಲೋಕಾಯುಕ್ತ ಬಲೆಗೆ
- ಬಸ್ -ಟಿಪ್ಪರ್ ನಡುವೆ ಓವರ್ ಟೇಕ್ : ಮಹಿಳೆ ಸಾವು
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
More Stories
20 ಸಾವಿರ ಲಂಚ ಪಡೆಯುವಾಗ PDO ಅಧಿಕಾರಿ ಲೋಕಾಯುಕ್ತ ಬಲೆಗೆ
ಬಸ್ -ಟಿಪ್ಪರ್ ನಡುವೆ ಓವರ್ ಟೇಕ್ : ಮಹಿಳೆ ಸಾವು
ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ