ಕನ್ನಡದ ಅದ್ಬುತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜನ್ಮದಿನವನ್ನು ನಿರ್ದೇಶಕರ ದಿನ ಎಂದು ಆಚರಿಸುವುದಾಗಿ ವಾಣಿಜ್ಯ ಮಂಡಳಿ ಘೋಷಿಸಿದೆ.
ಈ ಬಗ್ಗೆ ವಾಣಿಜ್ಯ ಮಂಡಳಿ ನಿರ್ದೇಶಕ ಭಾಮ ಹರೀಶ್ ಮಾತನಾಡಿ , ಪ್ರತಿ ವರ್ಷ ಡಿಸೆಂಬರ್ 1 ಪುಟ್ಟಣ್ಣ ಕಣಗಾಲ್ ಜನ್ಮ ದಿನವನ್ನು ನಿರ್ದೇಶಕರ ದಿನವನ್ನಾಗಿ ಆಚರಣೆ ಮಾಡೋಣ ಎಂದು ಪದಾಧಿಕಾರಿಗಳೆಲ್ಲಾ ಸೇರಿ ತೀರ್ಮಾನ ಮಾಡಿದ್ದೇವೆ.
ತೆಲುಗು ಚಿತ್ರರಂಗದಲ್ಲೂ ನಿರ್ದೇಶಕರ ದಿನ ಎಂದು ಆಚರಣೆ ಮಾಡಲಾಗುತ್ತಿದೆ, ಅಂತೆಯೇ ನಮ್ಮಲ್ಲೂ ಪ್ರತಿ ವರ್ಷ ಡಿಸೆಂಬರ್ 1 ರಂದು ದಿನ ಎಂದು ಆಚರಿಸುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ಎಸ್.ಆರ್.ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗದ ಪ್ರಸಿದ್ಧ ಹಾಗು ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು. ಕನ್ನಡ ಚಿತ್ರರಂಗ ಕಂಡ ಅದ್ವಿತೀಯ ನಿರ್ದೇಶಕರು. ನಿರ್ದೇಶಕ ರಲ್ಲದೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆಯುತ್ತಿದ್ದರು. ಹಿಂದಿ, ಮಲಯಾಳಂ ಭಾಷೆಗಳ ಕೆಲವು ಚಿತ್ರಗಳನ್ನೂ ನಿರ್ದೇಶಿಸಿದ್ದಾರೆ.
ಇವರ ಚಿತ್ರಗಳು ಅತ್ಯಂತ ಉತ್ಕೃಷ್ಟ ಮಟ್ಟದ್ದೆಂದು ಹಲವು ಕನ್ನಡಿಗರು ಅಭಿಪ್ರಾಯ ಪಡುತ್ತಾರೆ. ಕಣಗಾಲ್ ಅವರು ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು,ಮೂರು ಫಿಲ್ಮ್ಫೇರ್ ಪ್ರಶಸ್ತಿಗಳು ಮತ್ತು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದರು. ರೈತರನ್ನು ಮದುವೆಯಾಗುವ ಯುವತಿಗೆ 10 ಲಕ್ಷ ರು. ಪ್ರೋತ್ಸಾಹ ಧನಕ್ಕೆ ಆಗ್ರಹ
ಸಾಮಾನ್ಯವಾಗಿ ಕಲೆ, ಭಾವನಾತ್ಮಕತೆಯಿಂದ ಕೂಡಿದ ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ಕಣಗಾಲ್, ಕನ್ನಡ ಸಿನಿಮಾಕ್ಕೆ ಹೊಸ ರೂಪ ತಂದವರು.ಮೈಸೂರಿನ ಯುವ ಸಾಹಿತಿ ವಿ.ಶ್ರೀಧರ ಅವರು ಪುಟ್ಟಣ್ಣಕಣಗಾಲರ ಚಲನಚಿತ್ರಗಳ ವಿಮರ್ಶೆಯನ್ನು ಕುರಿತ ಕೃತಿ ‘ಕನ್ನಡ ಚಲನಚಿತ್ರರಂಗಕ್ಕೆ ಪುಟ್ಟಣ್ಣ ಕಣಗಾಲರ ಕೊಡುಗೆ’ ಎಂಬ ಕೃತಿಯನ್ನು ಹೊರತಂದಿರುವುದನ್ನು ಕಾಣಬಹುದು.
ಕರ್ನಾಟಕ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯವು ಚಲನಚಿತ್ರ ನಿರ್ದೇಶಕರು ಮತ್ತು ವಿವಿಧ ವ್ಯಕ್ತಿಗಳನ್ನು ಪುಟ್ಟಣ್ಣ ಕಣಗಲ್ ಪ್ರಶಸ್ತಿ ನೀಡಿ ಗೌರವಿಸುತ್ತದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment