ರೈತಾಪಿ ಯುವಕರು ಮದುವೆಯಾಗಲು ಹೆಣ್ಣು ಸಿಗದೇ ಇದೀಗ ವಧು-ವರರ ಸಮಾವೇಶದಲ್ಲಿ 250 ಜನ ಹುಡುಗಿಯರಿಗೆ 11 ಸಾವಿರ ಮಂದಿ ಯುವಕರು ತಮ್ಮ ಬಾಳ ಸಂಗಾತಿ ಆಯ್ಕೆ ಮಾಡಕೊಳ್ಳಲು ಕ್ಯೂ ನಲ್ಲಿ ನಿಂತಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಶ್ರೀ ಕ್ಷೇತ್ರದಲ್ಲಿ ನಡೆದ ಒಕ್ಕಲಿಗ ವಧು-ವರ ಸಮಾವೇಶದಲ್ಲಿ ಕಂಡು ಬಂದ ದೃಷ್ಯ ಇದು.ಮಂಡ್ಯದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಚಕ್ರದಡಿ ಸಿಕ್ಕಿ ಯೋಧ ಬಲಿ
ರೈತ ದೇಶದ ಬೆನ್ನೆಲುಬು. ರೈತನಿದ್ದರೆ ಮಾತ್ರ ದೇಶ ಸುಭೀಕ್ಷವಾಗಿ ಇರುತ್ತೆ ಅಂತಾ ಹೇಳ್ತಾರೆ. ಆದರೆ ಇದೀಗ ಅಂತಹ ರೈತ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ಮದುವೆಯಾಗಲು ರೈತ ಹೆಣ್ಣು ಕೇಳಲು ಹೋದ್ರೆ, ಹೆಣ್ಣೆತ್ತವರು ನಾವು ರೈತರಿಗೆ ನಮ್ಮ ಮಗಳನ್ನು ಕೊಡುವುದಿಲ್ಲ. ನಾವು ಪಟ್ಟಣದಲ್ಲಿ ಕೆಲಸದಲ್ಲಿ ಇರುವವರಿಗೆ ನಮ್ಮ ಮಗಳನ್ನು ಕೊಡ್ತೀವಿ ಎನ್ನುವವರ ಸಂಖ್ಯೆಯೇ ಹೆಚ್ಚಾಗಿದೆ. ಹೀಗಾಗಿ ರೈತ ಯುವಕರು ದಾಂಪತ್ಯ ಜೀವನ ತುಳಿಯಲು ಹುಡುಗಿ ಸಿಗದೇ ಮಂಡ್ಯ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪರದಾಡುತ್ತಿದ್ದಾರೆ.
ಭಾನುವಾರ ಆದಿಚುಂಚನಗಿರಿ ಯಲ್ಲಿ ನಡೆದ ವಧು-ವರರ ಸಮಾವೇಶದಲ್ಲಿ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ನಾನ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ವಧು-ವರರ ಆಯ್ಕೆಗೆ ಬಂದಿದ್ದರು.
ಸುಮಾರು 12 ಸಾವಿರ ಮಂದಿ ಸಮಾವೇಶದಲ್ಲಿ ಹೆಸರು ನೊಂದಣಿ ಮಾಡಕೊಂಡಿದ್ದರು ಈ ಪೈಕಿ 250 ಮಂದಿ ಮಾತ್ರ ಹುಡುಗಿಯರು ವರನಿಗಾಗಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಉಳಿದ 11,750 ಮಂದಿ ಯುವಕರು ದಾಂಪತ್ಯ ಜೀವನಕ್ಕೆ ಕಾಲಿಡಲು ವಧುವಿಗಾಗಿ ಹುಡುಕಾಟ ನಡೆಸಲು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಈ ಪೈಕಿ ಅತೀ ಹೆಚ್ಚು ರೈತ ಸಮುದಾಯದ ಯುವಕರೇ ಇರುವುದು ಆಶ್ಚರ್ಯದ ಸಂಗತಿಯಾಗಿದೆ.
ಮದುವೆಯಾಗಲು ರೈತರಿಗೆ ಹೆಣ್ಣು ಸಿಗುತ್ತಿಲ್ಲ ಎಂದರೆ ರೈತರ ಸ್ಥಿತಿ ಎಷ್ಟರ ಮಟ್ಟಿಗೆ ಇದೆ ಎಂಬುದು ಇದರಿಂದಲೇ ತಿಳಿಯುತ್ತದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ