ಬೆಂಗಳೂರು : ಕನ್ನಡ ಧಾರಾವಾಹಿವೊಂದರ ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಲ್ಲಿ ನಟ ಮಂಡ್ಯ ರಮೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ .
ಶೂಟಿಂಗ್ ಸೆಟ್’ನಲ್ಲಿ ಹಿರಿಯ ನಟ ಜಾರಿ ಬಿದ್ದ ಪರಿಣಾಮ ಅವರ ಕಾಲು ಮತ್ತು ಮುಂಗೈಗೆ ಗಂಭೀರ ಗಾಯಗಳಾಗಿದ್ದು, ಮುರಿತವಾಗಿರಬಹುದು ಎಂದು ಹೇಳಲಾಗುತ್ತಿದೆ .
ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದ್ದು, ಇಂದು ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದಾರೆ ಎಂದು ವರದಿಯಾಗಿದೆ.ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ – ಮಂಡಳಿಯಲ್ಲಿ ಸ್ಥಾನವಿಲ್ಲ-ಡಿಕೆಶಿ
ಹಿರಿಯ ನಟ ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ .