‘ನಾನು ರಾಧಿಕಾ ಕುಮಾರಸ್ವಾಮಿ’… ಎಂದು ಅಧಿಕೃತ Facebook ಪೇಜ್ ತೆರೆಯುವುದಾಗಿ ನಟಿ ರಾಧಿಕ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.
ರಾಧಿಕಾ ಹೆಸರಿನಲ್ಲಿ ಹತ್ತಾರು ಫೇಸ್ ಬುಕ್ ಪೇಜ್ ಗಳನ್ನು ಅಭಿಮಾನಿಗಳು ಕ್ರಿಯೇಟ್ ಮಾಡಿದ್ದಾರೆ. ಆದರೆ, ಅವರು ಯಾವುದೇ ಅಧಿಕೃತ ಫೇಸ್ ಬುಕ್ ಪೇಜ್ ಹೊಂದಿರಲಿಲ್ಲ.
ಈಗ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಲು ಪೇಜ್ ಅನ್ನು ತೆರೆಯುತ್ತಿರುವುದಾಗಿ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಬಗ್ಗೆ ಮಾಹಿತಿಗಳನ್ನು ಇಲ್ಲಿಯೇ ಹಂಚುತ್ತಾ ಹೋಗುತ್ತಾರಂತೆ.
ದಮಯಂತಿ ಚಿತ್ರದ ಮೂಲಕ ಕಮ್ ಬ್ಯಾಕ್ ಆದರು. ಸ್ವತಃ ಚಿತ್ರ ನಿರ್ಮಾಣಕ್ಕೂ ಇಳಿದರು. ಅರ್ಜುನ್ ಸರ್ಜಾ ಜತೆ ಮತ್ತೊಂದು ಸಿನಿಮಾ ಮಾಡಿದರು. ಈಗ ಮತ್ತಷ್ಟು ಚಿತ್ರಗಳನ್ನು ಮಾಡುವ ತಯಾರಿ ಮಾಡಿಕೊಂಡಿದ್ದಾರಂತೆ. ಹಾಗಾಗಿ ಅವೆಲ್ಲ ವಿಷಯಗಳನ್ನು ಅಭಿಮಾನಿಗಳ ಜತೆ ಹಂಚಿಕೊಳ್ಳಲು ಸ್ವಂತ ಫೇಸ್ ಬುಕ್ ವೇದಿಕೆಯನ್ನು ರಾಧಿಕಾ ಬಳಸಿಕೊಳ್ಳುತ್ತಿದ್ದಾರೆ.
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ
ಮಂಡ್ಯದ ಸ್ಟಾರ್ ಗ್ರೂಪ್ಸ್ ಮಾಲೀಕರ ನಿವಾಸದ ಮೇಲೆ ಬೆಳಿಗ್ಗೆ ಐಟಿ ದಾಳಿ
ಮಂಡ್ಯದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರ ನಿವಾಸದ ಮೇಲೆ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉದ್ಯಮಿ ಅಮಿರುಲ್ ಮುರ್ತುಜಾ ಹಾಗೂ ಸಹೋದರಾದ ಅಮ್ಜಾ, ಶಹಬಾಜ್, ಶಿರೋಜ್ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್
ಉದ್ಯಮ ಸೇರಿದಂತೆ ಹಲವಾರು ಉದ್ಯಮ ನಡೆಸುತ್ತಿದ್ದಾರೆ.
ಬೆಳಗಿನ ಜಾವ ಸುಮಾರು 4 ಗಂಟೆಗೆ ಕಾರುಗಳಲ್ಲಿ ಆಗಸಿದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಐಟಿ ದಾಳಿಯಲ್ಲಿ 10ಕ್ಕೂ ಹೆಚ್ಚು ಮನೆ, ಕಚೇರಿಗಳು, ಆಸ್ತಿ-ಪಾಸ್ತಿ, ಹಣ, ಚಿನ್ನಾಭರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ಗೊತ್ತಾಗಿದೆ