February 20, 2026

Newsnap Kannada

The World at your finger tips!

rahim uchil

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ

Spread the love

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್ ರಮೇಶ್ ಇಂದು ರಹೀಂ ಉಚ್ಚಿಲ್‌ ಅಧ್ಯಕ್ಷ ಸ್ಥಾನ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲಿ ಎರಡು ಬಾರಿ ರಹೀಂ ಉಚ್ಚಿಲ್ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದ ಎಬ್ಬಿಸಿದ್ದ ಹಿಜಬ್ ಕುರಿತಾಗಿ ಬಿಜೆಪಿ ನಿಲುವನ್ನು ರಹೀಂ ಸಮರ್ಥಿಸಿಕೊಂಡಿದ್ದರು.

ಆ ಬಳಿಕ ಹಲವು ಬೆದರಿಕೆ ಕರೆ ಕೂಡ ರಹೀಂ ಅವರಿಗೆ ಬಂದಿತ್ತು. ಹೊಸ ಬೆಳವಣಿಗೆಯಲ್ಲಿ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ.

error: Content is protected !!