Categories: Main News

ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್, ರಮ್ಯಾಗೆನೇ ನೋ ಎಂಟ್ರಿ; ಸಿಡಿಮಿಡಿಗೊಂಡು ವಾಪಸ್​ ಹೋದ ನಟಿ

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯ ಆಪ್ತೆ ನಟಿ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ವೇಳೆ ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಯಿತು. ಇದರಿಂದ ತೀವ್ರ ಕೋಪ, ಬೇಸರಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ.ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ – ವಿರಾಟ್ ರೂಪ ಪ್ರದರ್ಶನ : ಭಾರತಕ್ಕೆ ರೋಚಕ 4 ವಿಕೆಟ್ ಗೆಲುವು

ರಾಯಚೂರಿನ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ಸಂಜೆಯ ಸುಮಾರಿಗೆ ನಡೆದಿದ್ದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ಸಂಜೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯ, ಬಳಿಕ ರಾಹುಲ್ ಕಾರ್ನರ್ ಮೀಟಿಂಗ್​ ಸ್ಥಳಕ್ಕೂ ಆಗಮಿಸಿದ್ದರು.

ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಯಿತು. ಅತಿಥಿಗಳ ಪಟ್ಟಿಯಲ್ಲಿ ರಮ್ಯ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯ, ಕೆಲಹೊತ್ತು ಅಲ್ಲೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು.

Team Newsnap
Leave a Comment

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024