January 14, 2026

Newsnap Kannada

The World at your finger tips!

siddaramiah

ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ

Spread the love

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲು ಹೆಚ್ಚು ಸಮರ್ಥರು ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಸ್ತುತ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಪ್ರಧಾನಿ ಮೋದಿ ಒಬ್ಬರೇ ಎಂಬ ಬಿಜೆಪಿ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು, “ರಾಹುಲ್ ಗಾಂಧಿ ನರೇಂದ್ರ ಮೋದಿಗಿಂತ ನೂರು ಪಟ್ಟು ಹೆಚ್ಚು ಸಮರ್ಥರಾಗಿದ್ದಾರೆ ಎಂದು ಹೇಳಿದರು.

ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಇಂದು ಪ್ರಚಾರದ ಕೊನೆಯ ದಿನವಾಗಿದೆ.22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಮಂಡ್ಯ,ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

error: Content is protected !!