Categories: Main News

ಬೆಂಗಳೂರಿನಲ್ಲಿ ಭಾರಿ ಮಳೆ : ಸಿಲಿಕಾನ್ ಸಿಟಿ ಜಾಲಾವೃತ : ಮನೆಗಳಿಗೆ ನುಗ್ಗಿದ ನೀರು- ಜನರ ಪರದಾಟ

ತಡರಾತ್ರಿ ಪೂರ್ಣ ಸುರಿದ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದೆ. ತಡ ರಾತ್ರಿ ಪೂರ್ಣ ವರುಣನ ಆರ್ಭಟಕ್ಕೆ ಜನರು ಹೈರಾಣಾಗಿ ಹೋಗಿದ್ದಾರೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಓಕಳಿಪುರಂ ಅಂಡರ್ ಪಾಸ್​ನಲ್ಲಿ ಮಳೆ ನೀರು ನಿಂತಿದೆ, ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ರಸ್ತೆಯಲ್ಲಿನ ನೀರು ಹೊರ ಹೊಗದೇ ಅವಾಂತರ ಸೃಷ್ಟಿಯಾಗಿದೆ.

ನಿನ್ನೆ ಸಂಜೆಯಿಂದ ಶುರುವಾದ ಮಳೆಯಬ್ಬರದ ಅವಾಂತರಗಳು ಒಂದೆರಡಲ್ಲ. ಗೊರಗೊಂಟೆಪಾಳ್ಯ ಫ್ಲೈ ಓವರ್ ಬಳಿ ಸಂಪೂರ್ಣ ಟ್ರಾಫಿಕ್​ ಜಾಮ್ ಆಗಿತ್ತು. ಔಟರ್ ರಿಂಗ್ ರೋಡ್‌ನಲ್ಲಿ ಗಂಟೆಗಟ್ಟಲೆ ವಾಹನ ಸವಾರರು ಪರದಾಡುವ ಪರಿಸ್ಥಿತಿ, ಟ್ರಾಫಿಕ್​ ಜಾಮ್​ನಿಂದ ನಗರದಿಂದ ಹೊರವಲಯಕ್ಕೆ ಹೋಗುವವರ ಪಾಡು ಹೇಳತೀರದಂತಾಗಿದೆ.

ಗುರವೇ ಪರಬ್ರಹ್ಮ|| ಶಿಕ್ಷಕರ ದಿನಾಚರಣೆ (Teachers Day – 2022)

ದಾವಣಗೆರೆ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಹರಿಹರ, ಹೊನ್ನಾಳಿ, ನ್ಯಾಮತಿ ತಾಲೂಕಿನಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಬೆಳ್ಳಂಬೆಳಗ್ಗೆ ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ತುಮಕೂರು ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಗುಬ್ಬಿ ತಾಲೂಕಿನ ಸಿ. ಅರಿವೇಸಂದ್ರ ಗಾಮದಲ್ಲಿ 50 ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಬೆಂಗಳೂರು, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಕೋಲಾರ, ಮಂಡ್ಯ, ರಾಮನಗರ,ಶಿವಮೊಗ್ಗ, ತುಮಕೂರು, ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Team Newsnap
Leave a Comment
Share
Published by
Team Newsnap

Recent Posts

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024