ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸೂಚನೆ

Team Newsnap
1 Min Read

ಬಂಗಾಳ ಕೊಲ್ಲಿಯಲ್ಲಿ ಇಂದು ಮತ್ತು ನಾಳೆ ಕರಾವಳಿಯ ಹಲವು ಕಡೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನ 13, 14, 15ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಆಗಲಿದೆ,

ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಸಿನಿಮಾ ಮಾದರಿಯಲ್ಲಿ ಎಂಟ್ರಿಕೊಟ್ಟು ಪತಿಯ 2ನೇ ಮದುವೆ ನಿಲ್ಲಿಸಿದ ಮೊದಲ ಪತ್ನಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.

Share This Article
Leave a comment