Karnataka

ಮೈಸೂರು ಅರಮನೆ ಆವರಣದಲ್ಲಿ ಒಡೆಯರ್ ಕೊಡುಗೆಗಳ ಬಗ್ಗೆ ಹಂಸಲೇಖ ರೂಪಕಕ್ಕೆ ರಾಜಮಾತೆ‌ ಪ್ರಮೊದಾದೇವಿ ಇಂಗಿತ

ಬೆಂಗಳೂರು : ಮುಂದಿನ ದಸರಾ ಸಂಭ್ರಮಾಚರಣೆಯ ಮೊದಲೇ, ಮೈಸೂರು ನಗರದ ವಿಶ್ವ ವಿಖ್ಯಾತ ಅರಮನೆ ಆವರಣ ಹೊಸ ಪ್ರಯತ್ನವೊಂದಕ್ಕೆ ಸಾಕ್ಷಿಯಾಗಲಿದೆ. ಜನಪರ ಆಡಳಿತಗಾರ, ಆಧುನಿಕ ಭಾರತದ ಕನಸುಗಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ-ಸಾಧನೆ- ಕೊಡುಗೆ ಬಗ್ಗೆ ನಾದ ಬ್ರಹ್ಮ ಶ್ರೀ ಹಂಸಲೇಖ ರಚಿಸಲಿರುವ ರೂಪಕವೊಂದು ಅಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಘೋಷಣೆಗೆ ಸಾಕ್ಷಿಯಾಗಿದ್ದು, ನಗರದ ಬೆಂಗಳೂರು ಸಿಟಿ ಇನ್ಸಿಟ್ಯೂಟ್ ನಲ್ಲಿ ಶುಕ್ರವಾರ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಸ್ಮರಣೆ ಹಾಗು ನಾಲ್ವಡಿ ಕುರಿತ ಕಿರು ಚಿತ್ರ ಪ್ರದರ್ಶನ ಕಾರ್ಯಕ್ರಮ. ಬೆಂಗಳೂರು ಸಿಟಿ ಇನಸ್ಟಿಟ್ಯೂಟ್ ನೀಡಿರುವ ಗೌರವ ಸದಸ್ಯತ್ವವನ್ನು ಸ್ವೀಕರಿಸಿ ಮಾತನಾಡಿದ ರಾಜಮಾತೆ ಗೌರವಾನ್ವಿತ ಡಾ ಪ್ರಮೋದಾದೇವಿ ಒಡೆಯರ್ ಅವರು ಈ ಸಂಬಂಧ ಮುಂದಿಟ್ಟ ಕೋರಿಕೆಗೆ ಅಲ್ಲೆ ಒಪ್ಪಿಗೆ ಸೂಚಿಸಿದ ನಾದ ಬ್ರಹ್ಮ ಶ್ರೀ ಹಂಸಲೇಖ ಈ ರೂಪಕವನ್ನು ರಚಿಸಿ, ಕನ್ನಡಿಗರಿಗೆ ಅರ್ಪಿಸುದಾಗಿ ಪ್ರಕಟಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಧನೆ, ಈ ನಾಡಿಗೆ ಅವರ ಕೊಡುಗೆ ಅದ್ವಿತೀಯ. ಕರ್ನಾಟಕದ ಮನೆ-ಮನಗಳಲ್ಲೂ ಪ್ರಾತಸ್ಮರಣಿಯರಾಗಿರುವ ನಾಲ್ವಡಿಯವರ ಸ್ಮರಿಸಿ ಮಾತನಾಡಿದ ರಾಜಮಾತೆ ಗೌರವಾನ್ವಿತ ಡಾ ಪ್ರಮೋದಾದೇವಿ ಒಡೆಯರ್ ಈ ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿ ಎಂದು ಬಣ್ಣಿಸಿದರು.

“ನಾವೆಲ್ಲರೂ, ಈ ದೇಶ ಸೇವೆಗೆ ನಮ್ಮ ಬದುಕನ್ನು ಮುಡಿಪಾಗಿಡಬೇಕು,” ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.

ಇದೆ ಸಂದರ್ಭದಲ್ಲಿ ರಾಜಮಾತೆ ಗೌರವಾನ್ವಿತ ಡಾ ಪ್ರಮೋದಾದೇವಿ ಒಡೆಯರ್ ಹಾಗು ಹಂಸಲೇಖ ಅವರಿಗೆ ಬೆಂಗಳೂರು ಸಿಟಿ ಇನ್ಸಿಟ್ಯೂಟ್ ಗೌರವ ಸದಸ್ಯತ್ವ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಹಂಸಲೇಖ ನಾಲ್ವಡಿ ಅವರ ಸಾಧನೆ ನಮಗೆಲ್ಲರಿಗೂ ಆದರ್ಶಪ್ರಾಯ ಎಂದು ಬಣ್ಣಿಸಿದರು.

ಕನ್ನಡ ಭಾಷೆ-ಆಡಳಿತದ ಬಗ್ಗೆ ಮಾತನಾಡಿದ ಅವರು, ಕನ್ನಡವನ್ನು ಕೇವಲ ಭಾಷೆಯೆಂದು ಪರಿಗಣಿಸದೆ ಅದನ್ನು ನಮ್ಮ ಹಕ್ಕಿನ ಪತ್ರ ಎಂದು ತಿಳಿದುಕೊಳ್ಳಬೇಕು. ಈ ಹಕ್ಕು ನಮ್ಮೆಲ್ಲರಿಗೂ ದಕ್ಕುವಂತೆ ಆಗಬೇಕು ಎಂದು ತಿಳಿಸಿದರು. “ಈ ಬಗ್ಗೆ ನಾವು ಸದಾ ಎಚ್ಚರದಿಂದಿರಬೇಕು,” ಎಂದು ಅವರು ತಿಳಿಸಿದರು

ಬೆಂಗಳೂರಿನಲ್ಲಿ ಕನ್ನಡ -ಕನ್ನಡಿಗರ ಕುಸಿತದ ಬಗ್ಗೆ ಅವರು ಈ ಸಂದರ್ಭದಲ್ಲಿ ಕಳವಳ ವ್ಯಕ್ತಪಡಿಸಿದರು.

ಸಿಟಿ ಇನ್ಸಿಟ್ಯೂಟ್ ಅಧ್ಯಕ್ಷ ಶ್ರೀ ಕೆ ಸುಕುಮಾರ್, ಉಪಾಧ್ಯಕ್ಷ ಎಸ್ ಸಿ ಚಂದ್ರಶೇಖರ್, ಗೌರವ ಕಾರ್ಯದರ್ಶಿ ಲಕ್ಷ್ಮೀಶ ಚಂದ್ರ, ಗೌರವ ಖಜಾಂಚಿ ವಿರೂಪಾಕ್ಷ ಬಿ ಪಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಲೋಕ ಚುನಾವಣೆಗೆ ಬಿಜೆಪಿ ಭರದ ಸಿದ್ದತೆ: ವಿವಿಧ ರಾಜ್ಯಗಳಿಗೆ ಉಸ್ತುವಾರಿ ನೇಮಕ

ಸಭಾ ಕಾರ್ಯಕ್ರಮದ ಬಳಿಕ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳ ಭರಪೂರ ಮನೋರಂಜನೆ ಕಾರ್ಯಕ್ರಮ ನೋಡುಗರನ್ನು ಮುದಗೊಳಿಸಿತು. ಮುಂಬೈ, ಕೋಲ್ಕೊತಾ, ಚೆನ್ನೈನ ಖ್ಯಾತ ನೃತ್ಯ ತಂಡಗಳ ಪ್ರದರ್ಶನ, ಕನ್ನಡದ ಹೆಮ್ಮೆಯ ಬಾಲ ಕಲಾವಿದ ಅರ್ಜುನ್ ಇಟಗಿ ಹಾಡು, ನೋಡುಗರನ್ನು ಮನೋರಂಜನಾ ಲೋಕದಲ್ಲಿ ತೇಲಾಡಿಸಿತು.

Team Newsnap
Leave a Comment

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024