February 25, 2026

Newsnap Kannada

The World at your finger tips!

sriramulu 1

ರಾಜಣ್ಣ ಬಂಧನ :ವಿಜಯೇಂದ್ರ ವಿರುದ್ಧ ಶೀರಾಮುಲು ಕೆಂಡಾಮಂಡಲ

Spread the love

ಶ್ರೀರಾಮುಲು ಪಿ ಎ ರಾಜಣ್ಣ ವಂಚನೆ ಕೇಸ್ , ಸಿ ಎಂ ಪುತ್ರ ವಿಜಯೇಂದ್ರ ವಿರುದ್ದ ಸಚಿವ ಶ್ರೀರಾಮುಲು ಕೆಂಡಾಮಂಡಲವಾಗಿದ್ದಾರೆ ಮೂಲಗಳಿಂದ ತಿಳಿದು ಬಂದಿದೆ.

ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ ಕಾಯ್ತಾ ಇದ್ದರು. ಈಗಾಗಲೇ ಸಾಕಷ್ಟು ಹೆಸರು ಹಾಳು ಮಾಡಿದ್ದಾರೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಅಂದ್ರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವ ಬಗ್ಗೆ ರಾಮುಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

error: Content is protected !!