February 22, 2026

Newsnap Kannada

The World at your finger tips!

rajnikanth

ಅನಾರೋಗ್ಯ ಕಾರಣಕ್ಕಾಗಿ ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಇಲ್ಲ

Spread the love

ತಲೈವಾ, ಸೂಪರ್ ಸ್ಟಾರ್ ರಜಿನಿಕಾಂತ್ ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಈ ನಿರ್ಧಾರದಿಂದಾಗಿ ಹೊಸ ಪಕ್ಷ ಹಾಗೂ ರಜನಿ ರಾಜಕಾರಣದ ಸ್ಟೈಲ್ ನೋಡ ಬಯಸಿದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆಯಾಗಿದೆ.

ಆರೋಗ್ಯ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ನಾನು ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುತ್ತಿಲ್ಲ ಎಂದು ರಜಿನಿಕಾಂತ್ ಹೇಳಿದ್ದಾರೆ.

ಈ ಬಗ್ಗೆ ಸ್ವತಃ ರಜಿನಿಕಾಂತ್ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. ಸುದೀರ್ಘ ಮೂರು ಪುಟದ ಪತ್ರವನ್ನು ಪ್ರಕಟಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಅನಾರೋಗ್ಯ ವೇ ಪ್ರಮುಖ ಕಾರಣವಾಗಿದೆ ಎಂದಿದ್ದಾರೆ.

ಕಳೆದ ಶುಕ್ರವಾರ (ಡಿ.25) ದಂದು ರಕ್ತದೊತ್ತಡ ಸಮಸ್ಯೆಗೆ ಸಿಲುಕಿದ್ದ ರಜಿನಿಕಾಂತ್ ಹೈದರಾಬಾದ್ ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ನಂತರ ರಜಿನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆ ಮನೆಗೆ ಹೋಗಿ ವಿಶ್ರಾಂತಿ ಪಡೆಯುವ ವೇಳೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.ಈ ನಡುವೆ ಡಿಸೆಂಬರ್ 31 ಕ್ಕೆ ಹೊಸ ಪಕ್ಷ ಘೋ಼ಷಣೆ ಮಾಡುವುದಾಗಿಯೂ ಹೇಳಿದ್ದರು .

error: Content is protected !!