ತಲೈವಾ, ಸೂಪರ್ ಸ್ಟಾರ್ ರಜಿನಿಕಾಂತ್ ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಈ ನಿರ್ಧಾರದಿಂದಾಗಿ ಹೊಸ ಪಕ್ಷ ಹಾಗೂ ರಜನಿ ರಾಜಕಾರಣದ ಸ್ಟೈಲ್ ನೋಡ ಬಯಸಿದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆಯಾಗಿದೆ.
ಆರೋಗ್ಯ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ನಾನು ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುತ್ತಿಲ್ಲ ಎಂದು ರಜಿನಿಕಾಂತ್ ಹೇಳಿದ್ದಾರೆ.
ಈ ಬಗ್ಗೆ ಸ್ವತಃ ರಜಿನಿಕಾಂತ್ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. ಸುದೀರ್ಘ ಮೂರು ಪುಟದ ಪತ್ರವನ್ನು ಪ್ರಕಟಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಅನಾರೋಗ್ಯ ವೇ ಪ್ರಮುಖ ಕಾರಣವಾಗಿದೆ ಎಂದಿದ್ದಾರೆ.
ಕಳೆದ ಶುಕ್ರವಾರ (ಡಿ.25) ದಂದು ರಕ್ತದೊತ್ತಡ ಸಮಸ್ಯೆಗೆ ಸಿಲುಕಿದ್ದ ರಜಿನಿಕಾಂತ್ ಹೈದರಾಬಾದ್ ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ನಂತರ ರಜಿನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆ ಮನೆಗೆ ಹೋಗಿ ವಿಶ್ರಾಂತಿ ಪಡೆಯುವ ವೇಳೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.ಈ ನಡುವೆ ಡಿಸೆಂಬರ್ 31 ಕ್ಕೆ ಹೊಸ ಪಕ್ಷ ಘೋ಼ಷಣೆ ಮಾಡುವುದಾಗಿಯೂ ಹೇಳಿದ್ದರು .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ