ಬೆಂಗಳೂರಿನ ಮಹಾದೇವಪುರದಲ್ಲಿ ಇತ್ತೀಚೆಗೆ ಭಾರೀ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಉಂಟಾಗಿತ್ತು. ಈ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವಿಗೆ ಸೋಮವಾರ ಕಾರ್ಯಾಚರಣೆ ಆರಂಭಿಸಿದರು.
ಮುನೇನಕೊಳಲು, ಚಿನ್ನಪ್ಪನಹಳ್ಳಿ, ಚಳ್ಳಗಟ್ಟ, ಬಸವಣನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ಧತೆ ನಡೆಸಲಾಗಿದೆ.
4 ಪ್ರಮುಖ ಭಾಗಗಳಲ್ಲಿ ಮೊದಲ ಹಂತದ ಆಪರೇಷನ್ ಪ್ರಾರಂಭವಾಗಿದ್ದು, ಈ ಭಾಗದ ರಾಜಕಾಲುವೆ ಒತ್ತುವರಿದಾರರಿಗೆ ಬುಲ್ಡೋಜರ್ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದೆ.
ಪೋಕ್ಸೋ ಪ್ರಕರಣ : ಮುರುಘಾ ಸ್ವಾಮಿಯ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಕಂದಾಯ ಇಲಾಖೆಯ ಸರ್ವೆ ವರದಿಯಲ್ಲಿ ಮಳೆ ಹಾನಿಗೆ ಈ ಅಪಾರ್ಟ್ಮೆಂಟ್ಗಳೇ ಕಾರಣ ಎಂಬುದು ತಿಳಿದುಬಂದಿತ್ತು. 145 ಅಪಾರ್ಟ್ಮೆಂಟ್ಗಳಿಂದ ರಾಜಕಾಲುವೆ ಹಾಗೂ ಸಬ್ ಕಾಲುವೆಗಳ ಒತ್ತುವರಿಯಾಗಿತ್ತು. ಹಲವೆಡೆ ಕಾಂಪೌಂಡ್, ರಸ್ತೆ, ಮನೆ, ಪಾರ್ಟ್ಮೆಂಟ್ಗಳ ನಿರ್ಮಾಣ ಮಾಡಿಕೊಂಡು ಒತ್ತುವರಿ ಮಾಡಲಾಗಿದೆ. ಇಂದು 8ಕ್ಕೂ ಹೆಚ್ಚು ಕಡೆಗಳಲ್ಲಿ ಒತ್ತುವರಿ ತೆರವು ಕಾರ್ಯ ಪ್ರಾರಂಭವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ