ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಅನಾರೋಗ್ಯಕ್ಕೆ ಸೂಕ್ತ ಚಿಕಿತ್ಸೆ ಪಡೆಯಲು ಅಮೇರಿಕಾಕ್ಕೆ ತೆರಳಿದ್ದಾರೆ.
ಮೊನ್ನೆ ಅಷ್ಟೇ ಅಧಿಕ ರಕ್ತದೊತ್ತಡಕ್ಕೆ ಬಳಲಿ ಹೈದ್ರಾಬಾದ್ ನಲ್ಲಿ ತಾತ್ಕಾಲಿಕ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದ ರಜಿನಿ ಈಗ ಸಂಪೂರ್ಣ ಗುಣಮುಖರಾಗಲು ಚಿಕಿತ್ಸೆ ಪಡೆಯುವ ಹಿನ್ನೆಲೆಯಲ್ಲಿ ಅಮೇರಿಕಾಗೆ ಹೋಗಿದ್ದಾರೆ.
ತಮಿಳುನಾಡಿನಲ್ಲಿ ಸಿನಿಮಾ ರಂಗದಲ್ಲಿ ಯಶಸ್ವಿಯಾದ ರಜನಿಕಾಂತ್ ರಾಜಕಾರಣದಲ್ಲೂ ಯಶಸ್ವಿ ಆಗುವುದರ ಬಗ್ಗೆ ಸಂದೇಹ ಬಂದ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಗುಡ್ ಬೈ ಹೇಳಿದರು.
ಲಾಕ್ ಡೌನ್ ವೇಳೆಯಲ್ಲಿ ಕಿಡ್ನಿ ಸೋಂಕಿನಿಂದ ಬಳಲಿ ಚಿಕಿತ್ಸೆ ಪಡೆದಿದ್ದರು. ಆದರೆ ಆರೋಗ್ಯ ಮತ್ತೆ ಕೈ ಕೊಟ್ಟಿತು. ಇದರಿಂದಾಗಿ ರಾಜಕಾರಣದ ಪ್ರವೇಶ ನಿರ್ಧಾರವನ್ನು ಕೈ ಬಿಟ್ಟು ಆರೋಗ್ಯ ದತ್ತ ಗಮನ ನೀಡಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ಸಾಕಷ್ಟು ನಿರಾಶೆ ಯಾಗಿದೆ.
ಬಾಕಿ ಚಿತ್ರೀಕರಣ ಉಳಿದಿರುವ ಅಣ್ಣಾತೆ ಶೂಟಿಂಗ್ ಅನ್ನು ಅಮೇರಿಕಾದಿಂದ ಬಂದ ಮೇಲೆ ಮುಗಿಸುವುದಾಗಿ ರಜನಿ ಹೇಳಿದ್ದಾರೆ.
ರಜನಿಕಾಂತ್ ಅವರ ಅನಾರೋಗ್ಯ ದಿಂದಾಗಿ ರಾಜಕಾರಣದಿಂದ ದೂರ ಉಳಿಯವ ನಿರ್ಧಾರವು ನಟ ಕಮಲಹಾಸನ್ , ಖುಷ್ಬು ಸೇರಿದಂತೆ ಅನೇಕರಿಗೆ ಬೇಸರ ತರಿಸಿದೆ.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment