ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ ಹತ್ಯೆಗೆ ಆತನ ಎರಡನೇ ಹೆಂಡತಿ ಕಿರಣ ಹಾಗೂ ಇಬ್ಬರು ಪಾಲುದಾರರುಗಳು 10 ಲಕ್ಷರು ಸುಪಾರಿ ನೀಡಿರುವ ಸಂಗತಿ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಅಧ್ಯಕ್ಷ ಸಂಜಯ್ ರಜಪೂತಗೆ ಸುಪಾರಿ ನೀಡಿರುವುದು ಬಯಲಾಗಿದೆ.
ಬೆಳಗಾವಿ ಚೆನ್ನಮ್ಮ ನಗರದಲ್ಲಿ 10 ವರ್ಷಗಳ ಹಿಂದೆ ಗ್ಲೋಬಲ್ ಡೆವಲಪರ್ಸ್ ಹೆಸರಿನಲ್ಲಿ ಅಪಾರ್ಟ್ಮೆಂಟ್ ನಿರ್ಮಾಣ ಸಂಬಂಧ ಧರ್ಮೇಂದ್ರ, ಶಶಿಕಾಂತ ಹಾಗೂ ರಾಜು ಮಧ್ಯೆ ಪಾರ್ಟ್ನರ್ ಶಿಪ್ ಆಗಿತ್ತು. ಹತ್ತು ವರ್ಷವಾದರೂ ಮೊದಲು ಆರಂಭಿಸಿದ ಪ್ರಾಜೆಕ್ಟ್ ಮುಗಿಯದ ಹಿನ್ನೆಲೆ ವೈಷಮ್ಯವಿತ್ತು.
ಇನ್ನೊಂದೆಡೆ ಎರಡನೇ ಹೆಂಡತಿ ಕಿರಣ ಹಾಗೂ ಪತಿ ರಾಜು ಮೇಲೆ ದ್ವೇಷವಿತ್ತು. ಮೊದಲ ಮದುವೆಯನ್ನು ಬಚ್ಚಿಟ್ಟು ತನ್ನ ವಿವಾಹವಾಗಿದ್ದನೆಂಬ ದ್ವೇಷವೂ ಇತ್ತು.
ತನ್ನ ಹಾಗೂ ತನ್ನ ಇಬ್ಬರ ಮಕ್ಕಳ ಹೆಸರಿನಲ್ಲಿ ಆಸ್ತಿ ಮಾಡುವಂತೆ ಪ್ರತಿ ದಿನ ರಾಜುಗೆ ಪತ್ನಿ ಕಿರಣ ಒತ್ತಾಯಿಸುತ್ತಿದ್ದರು. ಆದರೆ ರಾಜು ಯಾವುದೇ ಆಸ್ತಿ ಎರಡನೇ ಹೆಂಡತಿ ಹೆಸರಲ್ಲಿ ಮಾಡದೇ ಇದ್ದಿದ್ದಕ್ಕೆ ಸಿಟ್ಟು ಇತ್ತು. ಹೀಗಾಗಿ ಪತಿಯ ಬ್ಯುಸಿನೆಸ್ ಪಾಲುದಾರರ ಜೊತೆಗೂಡಿ ಹತ್ಯೆಗೆ ಸಂಚು ರೂಪಿಸಿದ್ದಾರೆಂದು ಆರೋಪಿಸಲಾಗಿದೆ
ಮಾರ್ಚ್ 15ರ ಬೆಳಗ್ಗೆ 6 ಗಂಟೆ ಸುಮಾರಿಗೆ ರಾಜು ದೊಡ್ಡಬೊಮ್ಮನ್ನವರ ಹತ್ಯೆಗೈದು ಹಂತಕರು ಪರಾರಿಯಾಗಿದ್ದರು.
ಕೆಲ ಸಮಯದ ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಎರಡನೇ ಪತ್ನಿ ಕಿರಣ ಹಾಗೂ ಮತ್ತೋರ್ವ ಆರೋಪಿ ಧರ್ಮೇಂದ್ರ ತಮಗೇನೂ ಗೊತ್ತೇ ಇಲ್ಲದ ರೀತಿ ಸ್ಥಳಕ್ಕೆ ಬಂದು ನಾಟಕವಾಡಿದ್ದರು. ಈ ವೇಳೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಬೆಳಗಾವಿ ಗ್ರಾಮೀಣ ಪೋಲಿಸರು ಮೊಬೈಲ್ ಕರೆ ವಿವರ ಪರಿಶೀಲಿಸುವ ವೇಳೆ ಬ್ಯುಸಿನೆಸ್ ಪಾರ್ಟ್ನರ್ ಗಳ ಮೇಲೆ ಅನುಮಾನ ಮೂಡಿತ್ತು. ಹೀಗಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment