Main News

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭೆ ಸದಸ್ಯ ಜಗ್ಗೇಶ್ – ವಿಡಿಯೋ ನೋಡಿ

ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿರುವ ನಟ ಜಗ್ಗೇಶ್ ಕನ್ನಡದಲ್ಲೇ ಹಾಗೂ ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು

ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ರಾಜ್ಯಸಭೆ ಸದಸ್ಯ ಜಗ್ಗೇಶ್ ಹೇಳಿದರು.ಇದನ್ನು ಓದಿ –ಕೆ ಆರ್ ಎಸ್ ಭರ್ತಿಗೆ 5 ಅಡಿ ಬಾಕಿ : ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ ಒಳಹರಿವು

ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ವಿಡಿಯೋವನ್ನು ನಟ ಹಾಗೂ ಮೇಲ್ಮನೆ ಸದಸ್ಯ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

“ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣ ವಚನ ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ,” ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

ಜೂನ್ ತಿಂಗಳಿನಲ್ಲಿ ನಡೆದಿದ್ದ ಮೇಲ್ಮನೆ ಚುನಾವಣೆ: ಕಳೆದ ಜೂನ್ 10ರಂದು ಭಾರತದ 15 ರಾಜ್ಯಗಳ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅದೇ ದಿನ ಫಲಿತಾಂಶ ಹೊರ ಬಿದ್ದಿತು. ಮತದಾನಕ್ಕೂ ಪೂರ್ವದಲ್ಲಿಯೇ 11 ರಾಜ್ಯಗಳ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿತ್ತು. ಇದರ ಹೊರತಾಗಿ ಬಾಕಿ ಉಳಿದ 4 ರಾಜ್ಯಗಳ 16 ಸದಸ್ಯರ ಸ್ಥಾನಗಳಿಗೆ ಚುನಾವಣೆಯನ್ನು ನಡೆಸಲಾಗಿತ್ತು.


ನಾಲ್ಕು ಸ್ಥಾನಗಳ ಪೈಕಿ ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಮತ್ತು ಲೆಹರ್ ಸಿಂಗ್ ಸಿರೋಯಾ ಮೂರು ಸ್ಥಾನಗಳನ್ನು ಪಡೆದುಕೊಂಡರೆ, ಕಾಂಗ್ರೆಸ್‌ನ ಜೈರಾಮ್ ರಮೇಶ್ ಉಳಿದ ಒಂದು ಸ್ಥಾನದಲ್ಲಿ ಗೆಲುವಿನ ನಗೆ ಬೀರಿದ್ದರು.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024