ರಾಜ್ಯಸಭೆಗೆ ಕರ್ನಾಟಕದಿಂದ ಬಿಜೆಪಿ ಹೈ ಕಮ್ಯಾಂಡ್ ಅಚ್ಚರಿ ಅಭ್ಯರ್ಥಿ ನಟ ಜಗ್ಗೇಶ್ ಅವರನ್ನು ಕಣಕ್ಕೆ ಇಳಿಸಿದೆ. ಕರ್ನಾಟಕದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕನ್ನಡದ ನಟ ನವರಸ ನಾಯಕ ಜಗ್ಗೇಶ್ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೂರು ದಿನ ಬಾಕಿ ಇರುವಾಗಲೇ ಭಾರತೀಯ ಜನತಾ ಪಾರ್ಟಿ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಯಾರಿಗೂ ಗೊತ್ತಿಲ್ಲದಂತೆ ಜಗ್ಗೇಶ್ ಅವರನ್ನು ರಾಜ್ಯಸಭೆಯ ಅಭ್ಯರ್ಥಿಯನ್ನಾಗಿ ಪರಿಗಣಿಸುವಂತೆ ಶಿಫಾರಸ್ಸು ಮಾಡಿ ಕಳುಹಿಸಲಾಗಿತ್ತು ಎನ್ನಲಾಗಿದೆ.
ಇದನ್ನು ಓದಿ : ಪಂಜಾಬಿ ಜನಪ್ರಿಯ ಗಾಯಕ ಸಿಧೂ ಮೂಸ್ ವಾಲಾ ಗುಂಡೇಟಿನಿಂದ ಹತ್ಯೆ
ರಾಜ್ಯಸಭೆಗೆ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯ ವಿಧಾನ ಸಭೆಯಲ್ಲಿ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಇಬ್ಬರು ಹಾಗೂ ಕಾಂಗ್ರೆಸ್ನಿಂದ ಒಬ್ಬರನ್ನು ಆಯ್ಕೆ ಮಾಡಲು ಅವಕಾಶವಿದೆ.