ರಾಮನಗರ ನಗರಸಭೆ ಅಧಿಕಾರದ ಚುಕ್ಕಾಣಿಯನ್ನು ಕಾಂಗ್ರೆಸ್ ಹಿಡಿದಿದೆ. ಬಿಜೆಪಿಯ ನಾಯಕ, ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹಾಗೂ ಮಾಜಿ ಮುಖ್ಯ ಮಂತ್ರಿ ಎಚ್ಡಿಕೆಗೆ ಮುಖಭಂಗವಾಗಿದೆ.
ರಾಮನಗರ ನಗರಸಭೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಒಟ್ಟು 31 ವಾರ್ಡ್ಗಳ ಪೈಕಿ ಕಾಂಗ್ರೆಸ್ 19 ಹಾಗೂ ಜೆಡಿಎಸ್ 11 ವಾರ್ಡ್ನಲ್ಲಿ ಗೆಲುವು ಸಾಧಿಸಿದೆ. ಒಂದು ವಾರ್ಡ್ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಒಂದು ವಾರ್ಡ್ನಲ್ಲೂ ಖಾತೆ ತೆರೆದಿಲ್ಲ.
ಈ ಚುನಾವಣಾ ಫಲಿತಾಂಶದಿಂದ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ್ಗೆ ಮುಖಭಂಗವಾಗಿದೆ.
ಹಾಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಇದ್ದರೂ ರಾಮನಗರದಲ್ಲಿ 11 ಸ್ಥಾನಗಳಿಗೆ ಜೆಡಿಎಸ್ ತೃಪ್ತಿ ಪಟ್ಟುಕೊಂಡಿದೆ.
ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥ್ ನಾರಾಯಣ್ ಎಲೆಕ್ಷನ್ಗೆ ಅಬ್ಬರದ ಪ್ರಚಾರ ನಡೆಸಿದ್ದರು. 20 ವಾಡ್೯ಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಅಂತಾ ಹೇಳಿದ್ದರು. ಆದರೆ 1 ವಾರ್ಡ್ ನಲ್ಕೂ ಗೆದ್ದಿಲ್ಲ.