ಪ್ರೇಮ ಕುಮಾರಿ ಎಂಬ ಮಹಿಳೆ ಜೊತೆ ಪ್ರೀತಿ – ಪ್ರೇಮ ಪ್ರಕರಣದ ಆರೋಪ ಹೊತ್ತಿದ್ದ ಶಾಸಕ ರಾಮದಾಸ್ ಗೆ ಜಿಲ್ಲಾ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರೇಮ ಕುಮಾರಿ ಹಾಗೂ ರಾಮದಾಸ್ ನಡುವೆ ಅಂಕುರಿಸಿದ್ದ ಪ್ರೇಮ ಕೊನೆಗೆ ಸಾಕಷ್ಟು ವಿವಾದ ಸೃಷ್ಟಿಯಾಯಿತು. ಕೊನೆಗೆ ಪೋಲಿಸ್ ಠಾಣೆ ಮೆಟ್ಟಿಲೇರಿತ್ತು.
ಈ ನಡುವೆ ಪ್ರೇಮಕುಮಾರಿ ರಾಮದಾಸ್ ವಿರುದ್ಧ ಮಾಡಿದ್ದ ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ಸರಸ್ವತಿ ಪುರಂ ಪೋಲಿಸರು ಬಿ ರಿಪೋರ್ಟ್ ಹಾಕಿ ಕೇಸ್ ಕ್ಲೋಸ್ ಮಾಡಿದ್ದರು.
ಪೋಲಿಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ನ್ಯಾಯಾಲಯವು ತಿರಸ್ಕರಿಸಿತು. ಅಲ್ಲದೇ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ರದ್ದು ಮಾಡುವಂತೆ ರಾಮದಾಸ್ ಹೈ ಕೋಟ್೯ ಮೊರೆ ಹೋದಾಗ ಹೈಕೋರ್ಟ್ ಅರ್ಜಿಯನ್ನು ನಿರಾಕರಿಸಿತು.
ನಂತರ ರಾಮದಾಸ್ ಜಿಲ್ಲಾ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ಅರ್ಜಿ ಪರಿಶೀಲನೆ ಮಾಡಿ, 50 ಸಾವಿರ ರು ಮೊತ್ತದ ವೈಯಕ್ತಿಕ ಬಾಂಡ್ ಪಡೆದು ಜಾಮೀನು ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು