ಕನ್ನಡ ಚಿತ್ರರಂಗದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಪ್ಪು ಆಸ್ತಿ ಲೆಕ್ಕ ನೀಡಿ ಪಾಲಿಕೆಗೆ ಕೋಟಿ ಕೋಟಿ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ರಮೇಶ್ ಈ ಕುರಿತಂತೆ ದಾಖಲೆಗಳ ಸಮೇತ ಪಾಲಿಕೆ ಆಯುಕ್ತರಿಗೆ ಎನ್ಆರ್ ರಮೇಶ್ ದೂರು ಕೂಡ ಕೊಟ್ಟಿದ್ದಾರೆ.
ಜಾಲಹಳ್ಳಿ ಕ್ರಾಸ್ ಬಳಿಯಿರುವ ರಾಕ್ ಲೈನ್ ಮಾಲ್ನಿಂದ ತೆರಿಗೆ ವಂಚನೆ ಮಾಡಲಾಗಿದೆ. 2012-13 ರಿಂದ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಲೆಕ್ಕ ತೋರಿಸಿ ಕೋಟಿಗಟ್ಟಲೇ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಎನ್ಆರ್ ರಮೇಶ್ ದೂರಿದರು.
ಟಾಪ್ 100 ತೆರಿಗೆ ವಂಚಕರ ಪಟ್ಟಿಯಲ್ಲೂ ರಾಕ್ ಲೈನ್ ಹೆಸರು ಕಂಡು ಬಂದಿಲ್ಲ. ಇದು ಸಾಕಷ್ಟು ಸಂಶಯಕ್ಕೆ ಕಾರಣವಾಗಿದೆ. ರಾಕ್ಲೈನ್ ತೆರಿಗೆ ವಂಚನೆ ಮಾಡಿರುವ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೆ ದಾಖಲೆಗಳೊಂದಿಗೆ ರಮೇಶ್ ದೂರು ನೀಡಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!