ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗ : ಪೋಲಿಸ್ ಆಯುಕ್ತರಿಗೆ ದೂರು

Team Newsnap
1 Min Read

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಬಿಡುಗಡೆ ಮಾಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಾಂಬ್ ಸ್ಫೋಟಗೊಂಡಂತಾಗಿದೆ.

ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ಜಲ ಸಂಪನ್ಮೂಲ ಸಚಿವರ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದಾರೆ.

ಸಚಿವರ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಪಂತ್ ಗೆ ದೂರು ನೀಡಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿರುವ ವಿಡಿಯೋ ಇದೆ., ರಾಜ್ಯ ರಾಜಕಾರಣದಲ್ಲಿ ಈ ಸಿಡಿ ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.

ಈ ಪ್ರಕರಣದ ಸತ್ಯಾ ಸತ್ಯತೆ ಪೋಲಿಸರ ಸಮಗ್ರ ತನಿಖೆ ಯಿಂದ ಬೆಳಕಿಗೆ ಬರಬೇಕು

Share This Article
Leave a comment