ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋದಲ್ಲಿ ರಮೇಶ್ ಜಾರಕಿಹೊಳಿ ಕತ್ತಿನಲ್ಲಿರುವ ಮಚ್ಚೆ ಕಾಣಿಸುತ್ತಿಲ್ಲ. ಕತ್ತಿನಲ್ಲೊಂದು ಮಚ್ಚೆ ಇದೆ ಎಂಬುದು ನನಗೆ ಗೊತ್ತು. ವಿಡಿಯೋ ದಲ್ಲಿ ಮಚ್ಚೆ ಕಾಣುತ್ತಿಲ್ಲ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.
ಬೆಂಗಳೂರಿನ. ಸದಾಶಿವನಗರದಲ್ಲಿರುವ ಜಾರಕಿಹೊಳಿಯವರ ಭಾಗ್ಯಲಕ್ಷೀ ನಿವಾಸಕ್ಕೆ ಆಗಮಿಸಿದ ಮಹೇಶ್ ಕುಮಟಳ್ಳಿ ಮಾಧ್ಯಮಗಳೊಂದಿಗೆ ಮಾತನಾಡಿ ಈ ಘಟನೆ ನೋಡಿದಾಗ ನಮಗೂ ಆಶ್ಚರ್ಯವಾಯಿತು. ಜಾರಕಿಹೊಳಿ ಒಬ್ಬ ದೈವ ಭಕ್ತರು. ಇವರಿಗೆ ಏನಾಗಿದೆ ಇದು ನಿಜವೇ ಅಥವಾ ಸುಳ್ಳಾ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದರು.
ಜಾರಕಿಹೊಳಿಯವರು ಇದು ಫೇಕ್ ವಿಡಿಯೋ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಆದರೂ ಆ ವಿಡಿಯೋವನ್ನು ಗಮನಿಸಿದಾಗ ಪೂರ್ವನಿಯೋಜಿತ ಕೃತ್ಯದಂತೆ ಕಂಡುಬರುತ್ತಿದೆ ಎಂದರು.
ದೃಶ್ಯಗಳನ್ನು ಗಮನಿಸಿದರೆ ಇದೂ ಪೂರ್ವನಿಯೋಜಿತ ಕೃತ್ಯವಾಗಿ ಗೋಚರಿಸುತ್ತಿದೆ. ಮತ್ತೆ ಈ ದೃಶ್ಯವನ್ನು ಯಾರು ಚಿತ್ರಿಸಿದ್ದಾರೆ ಎಂದು ತನಿಖೆಯಾಗಬೇಕು. ಅ ವಿಡಿಯೋವನ್ನು ಗಮನಿಸಿದಾಗ ಅದು ಎಡಿಟ್ ಆಗಿರುವಂತೆ ಕಂಡು ಬರುತ್ತಿದೆ. ಇದರಿಂದ ನಮಗೆ ಮತ್ತು ಅವರ ಕುಟುಂಬದವರಿಗೆ ನೋವಾಗಿದೆ ಈ ನೋವಿಗೆ ಯಾರು ಬೆಲೆ ಕಟ್ಟುತ್ತಾರೆ ಎಂದು ಪ್ರಶ್ನಿಸಿದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment