Karnataka

ರಮೇಶ್ ಜಾರಕಿಹೊಳಿ ಅಜ್ಙಾತ ಸ್ಥಳಕ್ಕೆ : ತಪ್ಪು ಮಾಡಿಲ್ಲ – ರಾಜೀನಾಮೆ ಕೊಡಲ್ಲ ಸಚಿವ

ಅಶ್ಲೀಲ ವಿಡಿಯೋ ಸೋರಿಕೆಯಾಗುತ್ತಿ ದ್ದಂತೆ ನನ್ನದೇನು ತಪ್ಪಿಲ್ಲ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತೇನೆಂದು ಹೇಳಿದ್ದ ಸಚಿವ ರಮೇಶ್​ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ರಮೇಶ್​ ಜಾರಕಿಹೊಳಿ ರಾತ್ರಿಯೇ ದೆಹಲಿಗೆ ತೆರಳಬೇಕಿತ್ತು. ರಾತ್ರಿ ಹನ್ನೊಂದು ಗಂಟೆಯಿಂದ ಮನೆಯಿಂದ ಹೊರಟ ಜಾರಕಿಹೊಳಿ ಏರ್ಪೋರ್ಟ್​ ರಸ್ತೆಯಲ್ಲಿ ಮಾಧ್ಯಮಗಳ ಕಣ್ತಪ್ಪಿಸಿ ಎಸ್ಕೇಪ್​ ಆಗಿದ್ದಾರೆ.

ಇತ್ತ ಮನೆಗೂ ವಾಪಸ್​ ಬಂದಿಲ್ಲ. ಅತ್ತ ವಿಮಾನ ನಿಲ್ದಾಣದಲ್ಲೂ ಅವರ ಸುಳಿವಿಲ್ಲ. ಖಾಸಗಿ ಕಾರಿನಲ್ಲಿ ರಾತ್ರೋರಾತ್ರಿ ಅಜ್ಞಾತ ಸ್ಥಳಕ್ಕೆ ರಮೇಶ್​ ಜಾರಕಿಹೊಳಿ ತೆರಳಿದ್ದಾರೆನ್ನಲಾಗಿದೆ.

ನಿನ್ನೆ ಮಾಧ್ಯಮದವರ ಜೊತೆ ಮಾತನಾಡಿದ್ದ ನಾನು ಯಾವ ತಪ್ಪೂ ಮಾಡಿಲ್ಲ. ತಪ್ಪಿತಸ್ಥ ಎಂದು ದೃಢಪಟ್ಟರೆ ಆಗ ರಾಜೀನಾಮೆಯ ಪ್ರಶ್ನೆ ಉದ್ಭವಿಸುತ್ತದೆ ಎಂದಿದ್ದಾರೆ.

ರಾಸಲೀಲೆ ವಿಡಿಯೋ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಸಿಎಂಗೆ ಮನವಿ ಮಾಡುತ್ತೇನೆ. ಈ ಸುದ್ದಿ ಬಿತ್ತರವಾಗು ವಾಗ ನಾನು ಮೈಸೂರಿನಲ್ಲಿದ್ದೆ. ನೋಡಿ ಆಶ್ಚರ್ಯವಾಯಿತು. ಪಾಪ, ಆ ದೃಶ್ಯಗಳಲ್ಲಿ ಇರುವ ಯುವತಿ ಯಾರು ಅಂತ ನನಗೆ ಗೊತ್ತಿಲ್ಲ. ದಿನೇಶ್ ಕಲ್ಲಹಳ್ಳಿ ಯಾರು ಅಂತಲೂ ಗೊತ್ತಿಲ್ಲ ಎಂದರು.

ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ. ಸಿಎಂ ಬಿಎಸ್​ವೈ ಭೇಟಿ ಮಾಡಿದ ಬಳಿಕ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದರು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024