February 25, 2026

Newsnap Kannada

The World at your finger tips!

mandya , news , politics

ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ – ಸಚಿವ ಅಶೋಕ್ ಸಹಮತ

Spread the love

ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ನಮ್ಮ ಸಹಮತವಿದೆ. ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಶ್ರಮ ಸಾಕಷ್ಟಿದೆ. ಈಗ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ, ಪಕ್ಷದಲ್ಲಿ ಸಮನ್ವಯತೆ ಇಲ್ಲ. ಪಕ್ಷದ ರೈಲು ಇನ್ನೂ ಟ್ರ್ಯಾಕ್ ಗೆ ಇಳಿದಿಲ್ಲ. ಕೇಂದ್ರದಲ್ಲೂ ಸಹ ಸಮರ್ಥ ವಿರೋಧ ಪಕ್ಷದ ನಾಯಕರು ಇಲ್ಲದೆ ತಬ್ಬಿಬ್ಬಾಗಿದೆ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಜಾತಿ ರಾಜಕೀಯದಲ್ಲಿ ತೊಡಗಿರುವ ಪಕ್ಷದಲ್ಲಿ ಸಂವಿಧಾನ ಬದಲಾವಣೆ ಮೂಲಕ ಜಾತಿಗೊಂದರಂತೆ ಸಿಎಂ ಕುರ್ಚಿಯನ್ನು ಸೃಷ್ಟಿ ಮಾಡಬೇಕು ಅಷ್ಟೇ. ಅದು ಸಹ ಕಷ್ಟ ಸಾಧ್ಯ ಆದ್ದರಿಂದ ಕಾಂಗ್ರೆಸ್ ರಾಜ್ಯದಲ್ಲಿ ಮುಂದಿನ 20 ವರ್ಷ ಅಧಿಕಾರಕ್ಕೆ ಬರುವುದು ಸುಳ್ಳು ಎಂದು ಭವಿಷ್ಯ ನುಡಿದರು.

error: Content is protected !!