ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಮುಖ ಆರೋಪಿ ಬಂಧನ

Team Newsnap
1 Min Read

ಬೆಂಗಳೂರು : ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಕೇಸ್​ಗೆ ಸಂಬಂಧಪಟ್ಟಂತೆ ಎನ್ಐಎ ಅಧಿಕಾರಿಗಳು ಓರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ಬಾಂಬರ್​ಗೆ ಸಹಾಯ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಮುಜಾಮಿಲ್ ಶರೀಫ್ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳುನಾಡು, ಉತ್ತರಪ್ರದೇಶದ 18 ಕಡೆ ದಾಳಿ ನಡೆಸಿ ಮಹತ್ವದ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಾಂಬ್ ಬ್ಲಾಸ್ಟ್​ಗೆ ಸಂಚು ರೂಪಿಸಿದ್ದ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹಾ ಸೇರಿ ಬ್ಲಾಸ್ಟ್​ಗೆ ಸಂಚು ರೂಪಿಸಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

ಮುಸಾವೀರ್ ಹಾಗೂ ತಾಹಾಗೆ ಬಂಧಿತ ಆರೋಪಿ ಮುಜಾಮಿಲ್ ಶರೀಫ್ ಸ್ಫೋಟಕಗಳ ಸರಬರಾಜು ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ವಿಚಾರ ಸಾಬೀತು ಆಗುತ್ತಿದ್ದಂತೆ ಮುಜಾಮಿಲ್ ಶರೀಫ್​ನನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಈ ಮೂವರೂ ಆರೋಪಿಗಳ ಮನೆಗಳ ಮೇಲೆ ಅಧಿಕಾರಿಗಳು‌ ದಾಳಿ ನಡೆಸಿ ಸಾಕ್ಷ್ಯಗಳ ಸಂಗ್ರಹಿಸುತ್ತಿದ್ದಾರೆ. ಮಂಡ್ಯ : ಮೈತ್ರಿ ಅಭ್ಯರ್ಥಿ HDK ಗೆಲುವು ನಿಶ್ಚಿತ

ನಗದು ಸೇರಿ ಡಿಜಿಟಲ್ ಡಿವೈಸ್​ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ಕೇಪ್​ ಆದ ಮುಸಾವೀರ್ ಹಾಗೂ ಮತೀನ್ ತಾಹಾ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Share This Article
Leave a comment