Main News

ರಂಗಮಂದಿರ ಬುಕಿಂಗ್ ಆರಂಭ: ವಿಶೇಷ ಮಾರ್ಗಸೂಚಿ

ರಾಜ್ಯಸರ್ಕಾರವು ರಂಗಮಂದಿರಗಳನ್ನು ತೆರೆಯಲು ನಿರ್ಧರಿಸಿದೆ. ಕನ್ನಡ ಸಂಸ್ಕೃತಿ ಇಲಾಖೆಯು ರಂಗಮಂದಿರಗಳ ಆನ್‌ಲೈನ್ ಬುಕಿಂಗ್ ಅನ್ನು ಆರಂಭಿಸಿದ್ದು, ಅಕ್ಟೋಬರ್ 28 ರಿಂದಲೇ ರಂಗಮಂದಿರಗಳನ್ನು ಬುಕ್ ಮಾಡಬಹುದಾದ ಸೌಲಭ್ಯವನ್ನು ಪ್ರಾರಂಭಿಸಿದೆ. ಆ ಮೂಲಕ ಕಳೆದ ಆರು ತಿಂಗಳಿನಿಂದ ಬಂದ್ ಆಗಿದ್ದ ರಂಗಚಟುವಟಿಕೆಗಳು ಪುನರರಾರಂಭಗೊಳ್ಳಲು ಉತ್ತೇಜನ ನೀಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿರುವ ರವೀಂದ್ರ ಕಲಾಕ್ಷೇತ್ರ, ನಯನ ಸಭಾಂಗಣ ಸೇರಿದಂತೆ 16 ರಂಗಮಂದಿರಗಳು ಬುಕಿಂಗ್‌ಗೆ ಲಭ್ಯವಿವೆ. ತಂಡಗಳು ಸಭಾಂಗಣಗಳನ್ನು ಬುಕ್ ಮಾಡಿಕೊಂಡು ಸಾಂಸ್ಕೃತಿಕ ಚಟುವಟಿಕೆ ಪ್ರಾರಂಭಿಸಬಹುದಾಗಿದೆ.

ರಂಗಚಟುವಟಿಕೆ ಪುನರಾರಂಭಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಾರ್ಗಸೂಚಿಯೊಂದನ್ನು ಸಿದ್ಧಪಡಿಸಿದ್ದು, ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಿದೆ. ಅನುಮೋದನೆಯ ನಂತರ ಅದನ್ನು ಜಾರಿಗೆ ತರಲಾಗುತ್ತದೆ.

ಮೂಲಗಳ ಪ್ರಕಾರ, ಚಿತ್ರಮಂದಿರಗಳಿಗೆ ವಿಧಿಸಿದಂತೆಯೇ ಒಟ್ಟು ಆಸನ ವ್ಯವಸ್ಥೆಯ 50% ಪ್ರೇಕ್ಷಕರಿಗೆ ಮಾತ್ರ ಅವಕಾಶ, ಕಲಾ ತಂಡಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ, ಸಭಾಂಗಣದಲ್ಲಿ ಕಡ್ಡಾಯ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಇನ್ನಿತರೆ ನಿಯಮಗಳನ್ನು ಮಾರ್ಗಸೂಚಿ ಒಳಗೊಂಡಿರಲಿದೆ.

ಇನ್ನು ಮುಂದೆ ಸೇವಾ ಸಧನ ಆಪ್ ಮೂಲಕ ರಂಗಮಂದಿರಗಳು, ಸಭಾಂಗಣಗಳನ್ನು ಬುಕ್ ಮಾಡುವ ಸೌಲಭ್ಯ ಲಭ್ಯವಾಗಲಿದೆ. ಕೆಲವರು ಹಲವಾರು ದಿನಗಳಿಗೆ ರಂಗಮಂದಿರಗಳನ್ನು ಬುಕ್ ಮಾಡಿಕೊಳ್ಳುತ್ತಿದ್ದರು. ಆದರೆ ಆನ್‌ಲೈನ್ ಬುಕಿಂಗ್‌ನಿಂದ ಎಲ್ಲರಿಗೂ ಸಮಾನ ಅವಕಾಶ ದೊರೆಯುವ ನಿರೀಕ್ಷೆ ಇದೆ.

ಖಾಸಗಿ ಸಭಾಂಗಣಗಳು ಸದ್ಯಕ್ಕೆ ಆರಂಭಗೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಸರ್ಕಾರಿ ಅಧೀನದ ರಂಗಮಂದಿರಗಳಲ್ಲಿ ಸದ್ಯಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಲಿವೆ, ಕಾರ್ಯಕ್ರಮಗಳಿಗೆ ಜನ ಸ್ಪಂದನೆ ನೋಡಿಕೊಂಡು ಖಾಸಗಿ ರಂಗಮಂದಿರಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024