April 16, 2025

Newsnap Kannada

The World at your finger tips!

ranya

ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

Spread the love

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್ ಕೆಲವು ಕಾಂಗ್ರೆಸ್ ಸಚಿವರಿಗೆ ಕರೆ ಮಾಡಿ ತಮ್ಮನ್ನು ರಕ್ಷಿಸಲು ಯತ್ನಿಸಿದ್ದಾಳೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪಿಸಿದ್ದಾರೆ.

ಭರತ್ ಶೆಟ್ಟಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂದರ್ಭದಲ್ಲಿ, “ಸಚಿವರು ಕೂಡ ರನ್ಯಾ ರಾವ್‌ಗೆ ಬೆಂಬಲ ನೀಡಲು ಕರೆ ಮಾಡುತ್ತಿದ್ದಾರೆ.

ಸದ್ಯ ಈ ಪ್ರಕರಣವನ್ನು ಸಿಬಿಐ ಹಸ್ತಗತ ಮಾಡಿಕೊಂಡಿದೆ, ಇದರ ಹಿಂದೆ ಯಾರೆಲ್ಲಾ ಇದ್ದಾರೆ ಮತ್ತು ಯಾರು ಕೈವಾಡ ಮಾಡಿದ್ದಾರೆ ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ. ಸಿಬಿಐ ತನಿಖಾ ವರದಿಗಾಗಿ ನಾವು ಕಾಯುತ್ತಿದ್ದೇವೆ,” ಎಂದರು.

ಇದನ್ನು ಓದಿ –ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ

ಅದರೊಂದಿಗೆ, ರನ್ಯಾ ರಾವ್ ಒಡೆತನದ ಕಂಪನಿಗೆ ಸರ್ಕಾರ ಜಮೀನು ಮಂಜೂರು ಮಾಡಿರುವ ಕುರಿತು ಪ್ರತಿಕ್ರಿಯಿಸಿ, “ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕ್ರಿಮಿನಲ್ ಕೇಸಾಗಿದೆ. ಜಮೀನು ಮಂಜೂರಾತಿಯಲ್ಲಿ ಯಾವುದೇ ಅನಿಯಮಿತತೆ ನಡೆದಿದ್ದರೆ ಅದನ್ನು ಬಹಿರಂಗಪಡಿಸಲಿ. ಈ ಪ್ರಕ್ರಿಯೆಯಲ್ಲಿ ಯಾವುದೇ ತಪ್ಪುಗಳಿಲ್ಲ. ನಮ್ಮದೇ ಸರ್ಕಾರವಿದೆ, ಜಾಗ ಮಂಜೂರಾತಿಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದರ ಬಗ್ಗೆ ಸರಿಯಾಗಿ ತನಿಖೆ ಮಾಡಿಸಲಿ,” ಎಂದು ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!