ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲಿನ ಅತ್ಯಾಚಾರ, ಕೊಲೆಯ ಪ್ರಕರಣದ ಬಗ್ಗೆ ಸಿಎಂ ಬೊಮ್ಮಾಯಿ ತೀವ್ರ ದುಃಖ ವ್ಯಕ್ತ ಪಡಿಸಿ,ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ಮತ್ತು ಸಂಸ್ಕೃತಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ, ಪ್ರವಾಸೋದ್ಯಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮಂಡ್ಯ ಜಿಲ್ಲೆ ಇವರುಗಳ ಸಹಯೋಗದೊಂದಿಗೆ ಕೆ ಆರ್ ಪೇಟೆ ಸಂಗಮ, ಅಂಬಿಗರಹಳ್ಳಿ – ಸಂಗಾಪುರ – ಪುರದಲ್ಲಿ ಆಯೋಜಿಸಿರುವ ಮಲೆಮಹದೇಶ್ವರರ ಮಹಾಕುಂಭಾ ಮೇಳ 2022 ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂಸದೆ ಸುಮಲತಾ ಮಳವಳ್ಳಿಯ ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ. ಇದು ಸಮಾಜದಲ್ಲಿ ಎಂದೆಂದೂ ನಡೆಯಬಾರದು. ಇದೊಂದು ಅತ್ಯಂತ ಅಮಾನುಷ್ಯ ಕೃತ್ಯವಾಗಿದೆ. ಇದನ್ನು ಎಷ್ಟು ಕಠಿಣ ಶಬ್ದಗಳಲ್ಲಿ ಖಂಡಿಸೋದಕ್ಕೆ ಸಾಧ್ಯಾನೋ ಅಷ್ಟು ಹೇಳಿದರು ಅದು ಕಡಿಮೆಯೇ. ಏನೂ ಅರಿಯದ ಕಂದಮ್ಮನ ಪರಿಸ್ಥಿತಿ ನೋಡಿದರೆ ಕರುಳು ಕಿತ್ತು ಬರುತ್ತದೆ ಎಂದರು.ಬಾಡಿಗೆ ತಾಯ್ತತನ: ವಿಘ್ನೇಶ್ ,ನಯನಾತಾರಾ 6 ವರ್ಷದ ಹಿಂದೆಯೇ ರಿಜಿಸ್ಷ್ರಾರ್ ವಿವಾಹ – ವಿವಾದಕ್ಕೆ ತೆರೆ
ಈ ನಡುವೆ ಸಿಎಂ ಮಾತನಾಡಿ ಪೊಲೀಸ್ ಇಲಾಖೆಯಿಂದ ಸಮಗ್ರ ತನಿಖೆಯ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಎಲ್ಲಾ ಕೇಸ್ ಹಾಕಿದ್ದಾರೆ. ಈಗಾಗಲೇ ಪೊಲೀಸ್ ಮಹಾನಿರ್ದೇಶಕರಿಗೂ ನಾನು ಸೂಚನೆ ನೀಡಿದ್ದೇನೆ. ಎಫ್ಎಸ್ಎಲ್ ವರದಿ ಬಂದ ನಂತರ ಚಾರ್ಜ್ ಶೀಟ್ ಹಾಕುವುದಾಗಿ ಹೇಳಿದ್ದಾರೆ. ಪ್ರಕರಣ ಸಂಬಂಧ ಆರೋಪಿಗೆ ಉಗ್ರ ಶಿಕ್ಷೆ ಆಗಬೇಕು. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ