ಮೈಸೂರಿನಲ್ಲಿ ಕಳೆದ ಮಂಗಳವಾರ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೊರೆತ ಸುಳಿವಿನ ಮೇರೆಗೆ ಎರಡು ತಂಡಗಳು ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದೆ ಎಂದು ವರದಿಯಾಗಿದೆ.
ಮೈಸೂರಿನಲ್ಲಿ ಓದುತ್ತಿರುವ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಈ ದುಷೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಮೇರೆಗೆ ಮೈಸೂರು ಪೊಲೀಸರ ತಂಡ ತೆರಳಿದೆ. ತಮಿಳುನಾಡಿನ ಒಬ್ಬ ಮತ್ತು ಕೇರಳ ಮೂವರು ವಿದ್ಯಾರ್ಥಿಗಳು ಭಾಗಿಯಾಗಿರುವ ಶಂಕೆ ಇದೆ.
ಘಟನೆ ನಡೆದ ಮಾರನೇ ದಿನವೂ ಮೈಸೂರಿನಲ್ಲೇ ಇದ್ದ ಈ ಆರೋಪಿಗಳು ವಿಷಯ ಬಹಿರಂಗಗೊಳ್ಳುತ್ತಲೇ ನಗರದಿಂದ ಹೊರಟಿದ್ದಾರೆ ಎನ್ನಲಾಗಿದೆ. ಬುಧವಾರ ನಡೆದ ಪರೀಕ್ಷೆಯಲ್ಲಿ ಐವರು ವಿದ್ಯಾರ್ಥಿಗಳು ಗೈರು ಆಗಿರುವುದು ಪೊಲೀಸರ ಅನುಮಾನವನ್ನು ಇಮ್ಮಡಿಗೊಳಿಸಿದೆ.
ಇಂದು ಸಂಜೆ ಪತ್ರಿಕಾಗೋಷ್ಠಿ: ಈಗ ಮೈಸೂರಿನಲ್ಲಿರುವ ಗೃಹಸಚಿವ ಆರಗಜ್ಞಾನೇಂದ್ರ ಅವರು ಸಂಜೆ 5.3೦ಕ್ಕೆ ಪತ್ರಿಕಾಗೋಷ್ಠಿ ನಡೆಸುವರು. ಅಲ್ಲಿ ಕೆಲವು ಮಹತ್ವದ ವಿಚಾರಗಳನ್ನು ಬಹಿರಂಗಗೊಳಿಸುವರೆಂದು ಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ